9:09 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾರ್ಕಳ: ಕೇರಳ ಮೂಲದ ವ್ಯಕ್ತಿಯ ಸುಟ್ಟ ಶವ ಪತ್ತೆ: ಕೊಲೆ ಶಂಕೆ; ಕೆಲಸಗಾರ ನಾಟ್ ರಿಚಬಲ್

21/10/2022, 22:09

ಕಾರ್ಕಳ(reporterkarnataka.com): ಸಾಣೂರು ಶುಂಠಿಗುಡ್ಡೆ ಎಂಬಲ್ಲಿ ವ್ಯಕ್ತಿ ಯೊಬ್ಬರ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಗೋಪಿ (60) ಕೇರಳ ಮೂಲದವರು ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಕೊಲೆಗೈದು ಸುಡಲಾಗಿದೆ ಎಂದು ಸಂಶಯ ವ್ಯಕ್ತವಾಗಿದೆ.

ಕಾರ್ಕಳದ ವಿವೇಕಾನಂದ ಶೆಣೈ ಎಂಬುವವರು ಸಾಣೂರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿ ಕೇರಳದ ಬಿಜು ಥೋಮಸ್ ಎಂಬುವವರ ರಬ್ಬರ್ ಪ್ಲಾಂಟೇಶನ್ ಪಡೆದುಕೊಂಡು ವ್ಯವಹಾರ ಮಾಡಿಕೊಂಡಿದ್ದು ದಿಲೀಪ್, ವಿವೇಕಾನಂದ ಶೆಣೈ ಎಂಬುವವರೊಂದಿಗೆ ಗೇರು ಬೀಜ ಕಾರ್ಖಾನೆಯ ಪಾಲುದಾರನಾಗಿ ಕೆಲಸ ಮಾಡಿಕೊಂಡಿದ್ದರು.

ಪ್ಲಾಂಟೇಷನ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದಿಲೀಪ್ ಅವರಿಗೆ ಗ್ರಾಸ್ ಕಟ್ಟಿಂಗ್ ಮಾಡಲು ಬಂದ ವಸಂತ ಎಂಬಾತ ಕರೆ ಮಾಡಿ ಗೇಟಿನ ಮುಂದೆ ಸ್ವಲ್ಪ ದೂರದಲ್ಲಿ ದಾರಿಯ ಬದಿಯಲ್ಲಿ ಮೃತದೇಹದಂತೆ ಪತ್ತೆಯಾದುದರ ಕುರಿತು ತಿಳಿಸಿದ್ದು ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದಾಗ ಮೃತದೇಹ ಪತ್ತೆಯಾಗಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಗೋಪಿ ಎಂಬಾತನ ಮೃತದೇಹ ಇದಾಗಿದ್ದು ಮೃತದೇಹದ ಹತ್ತಿರ ಸಿಗರ್ ಲೈಟರ್ ಹಾಗೂ ಪೆಟ್ರೋಲ್ ಕ್ಯಾನಿನ ಮುಚ್ಚಳ ಕಂಡುಬಂದಿದೆ. ಇನ್ನೊಬ್ಬ ಕಾರ್ಮಿಕ ಬಾಹುಲೇಯನ್ ಎಂಬಾತನಿಗೆ ಕರೆ ಮಾಡಿದಾಗ ಮೊಬೈಲ್ ಪೋನ್ ಸ್ವಿಚ್ಆಫ್ ಆಗಿದೆ.
ಎರಡು ದಿನಗಳ ಹಿಂದೆ ದಿಲೀಪ್ ರವರೊಂದಿಗೆ ಗೋಪಿ ಮಾತನಾಡಿದ್ದು ಬಳಿಕ ಈ ಕೊಲೆ ನಡೆದಿದೆ .ಜೊತೆಯಲ್ಲಿದ್ದ ಕೆಲಸಗಾರ ಬಾಹುಲೇಯನ್ ಕಾಣೆಯಾಗಿರುವುದರಿಂದ ಗೋಪಿಯನ್ನು ಆತನೇ ಕೊಲೆಗೈದು ಸುಟ್ಟಿದ್ದಾನೆ ಎಂದು ಸಂಶಯಿಸಲಾಗಿದೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು