2:18 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಾರ್ಕಳ: ಕೇರಳ ಮೂಲದ ವ್ಯಕ್ತಿಯ ಸುಟ್ಟ ಶವ ಪತ್ತೆ: ಕೊಲೆ ಶಂಕೆ; ಕೆಲಸಗಾರ ನಾಟ್ ರಿಚಬಲ್

21/10/2022, 22:09

ಕಾರ್ಕಳ(reporterkarnataka.com): ಸಾಣೂರು ಶುಂಠಿಗುಡ್ಡೆ ಎಂಬಲ್ಲಿ ವ್ಯಕ್ತಿ ಯೊಬ್ಬರ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಗೋಪಿ (60) ಕೇರಳ ಮೂಲದವರು ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಕೊಲೆಗೈದು ಸುಡಲಾಗಿದೆ ಎಂದು ಸಂಶಯ ವ್ಯಕ್ತವಾಗಿದೆ.

ಕಾರ್ಕಳದ ವಿವೇಕಾನಂದ ಶೆಣೈ ಎಂಬುವವರು ಸಾಣೂರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿ ಕೇರಳದ ಬಿಜು ಥೋಮಸ್ ಎಂಬುವವರ ರಬ್ಬರ್ ಪ್ಲಾಂಟೇಶನ್ ಪಡೆದುಕೊಂಡು ವ್ಯವಹಾರ ಮಾಡಿಕೊಂಡಿದ್ದು ದಿಲೀಪ್, ವಿವೇಕಾನಂದ ಶೆಣೈ ಎಂಬುವವರೊಂದಿಗೆ ಗೇರು ಬೀಜ ಕಾರ್ಖಾನೆಯ ಪಾಲುದಾರನಾಗಿ ಕೆಲಸ ಮಾಡಿಕೊಂಡಿದ್ದರು.

ಪ್ಲಾಂಟೇಷನ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದಿಲೀಪ್ ಅವರಿಗೆ ಗ್ರಾಸ್ ಕಟ್ಟಿಂಗ್ ಮಾಡಲು ಬಂದ ವಸಂತ ಎಂಬಾತ ಕರೆ ಮಾಡಿ ಗೇಟಿನ ಮುಂದೆ ಸ್ವಲ್ಪ ದೂರದಲ್ಲಿ ದಾರಿಯ ಬದಿಯಲ್ಲಿ ಮೃತದೇಹದಂತೆ ಪತ್ತೆಯಾದುದರ ಕುರಿತು ತಿಳಿಸಿದ್ದು ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದಾಗ ಮೃತದೇಹ ಪತ್ತೆಯಾಗಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಗೋಪಿ ಎಂಬಾತನ ಮೃತದೇಹ ಇದಾಗಿದ್ದು ಮೃತದೇಹದ ಹತ್ತಿರ ಸಿಗರ್ ಲೈಟರ್ ಹಾಗೂ ಪೆಟ್ರೋಲ್ ಕ್ಯಾನಿನ ಮುಚ್ಚಳ ಕಂಡುಬಂದಿದೆ. ಇನ್ನೊಬ್ಬ ಕಾರ್ಮಿಕ ಬಾಹುಲೇಯನ್ ಎಂಬಾತನಿಗೆ ಕರೆ ಮಾಡಿದಾಗ ಮೊಬೈಲ್ ಪೋನ್ ಸ್ವಿಚ್ಆಫ್ ಆಗಿದೆ.
ಎರಡು ದಿನಗಳ ಹಿಂದೆ ದಿಲೀಪ್ ರವರೊಂದಿಗೆ ಗೋಪಿ ಮಾತನಾಡಿದ್ದು ಬಳಿಕ ಈ ಕೊಲೆ ನಡೆದಿದೆ .ಜೊತೆಯಲ್ಲಿದ್ದ ಕೆಲಸಗಾರ ಬಾಹುಲೇಯನ್ ಕಾಣೆಯಾಗಿರುವುದರಿಂದ ಗೋಪಿಯನ್ನು ಆತನೇ ಕೊಲೆಗೈದು ಸುಟ್ಟಿದ್ದಾನೆ ಎಂದು ಸಂಶಯಿಸಲಾಗಿದೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು