2:04 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ನವೆಂಬರ್ ತಿಂಗಳಾಂತ್ಯಕ್ಕೆ ಸುರತ್ಕಲ್ ಟೋಲ್‌ಗೇಟ್ ತೆರವು: ಉಡುಪಿಯಲ್ಲಿ ಸಚಿವ ಸುನಿಲ್ ಕುಮಾರ್

22/10/2022, 15:44

ಉಡುಪಿ(reporterkarnataka.com): ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ಟೋಲ್‌ ಗೇಟ್ ತೆರವು ಕಾರ್ಯ ಅಂತಿಮ ಹಂತದಲ್ಲಿದ್ದು, ನವೆಂಬರ್ ತಿಂಗಳಾಂತ್ಯಕ್ಕೆ ಟೋಲ್‌ಗೇಟ್ ತೆರವು ಮಾಡಲಾಗುವುದು.ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್ ಹೇಳಿದರು.

ಶನಿವಾರ ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು, ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ನನಗಿರುವ ಮಾಹಿತಿ ಪ್ರಕಾರ ನವೆಂಬರ್ ಅಂತ್ಯಕ್ಕೆ ತೆರವಾಗಲಿದೆ ಎಂದರು.

ಮಾಜಿ ಕಾರ್ಪೋರೇಟರ್ , ಕಾಂಗ್ರೆಸ್ ಮುಖಂಡೆ
ಪ್ರತಿಭಾ ಕುಳಾಯಿ ವಿರುದ್ದ ಅಶ್ಲೀಲ ಟ್ರೋಲ್ ಕುರಿತು ಕೇಳಲಾದ ಪ್ರಶ್ನೆಗೆ ಸಚಿವರು, ‘ನೋ ಕಮೆಂಟ್ಸ್’ ಎಂದು ನುಣುಚಿಕೊಂಡರು.

ಕಲ್ಲಿದ್ದಲು ಮತ್ತು ಕಚ್ಚಾ ವಸ್ತುಗಳ ದರಕ್ಕನುಗುಣವಾಗಿ ವಿದ್ಯುತ್ ದರ ಪರಿಷ್ಕರಣೆಯಾಗುತ್ತದೆ. ವರ್ಷದಲ್ಲಿ ಒಮ್ಮೆ ಮಾತ್ರ ವಿದ್ಯುತ್ ದರ ಪರಿಷ್ಕರಿಸುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿದ್ದೇನೆ. ಪ್ರಿಪೇಯ್ಡ್‌ ಮೀಟರ್‌ಗಳನ್ನು ಮೊದಲು ಸರಕಾರಿ ಇಲಾಖೆಗಳಲ್ಲಿ ಅಳವಡಿಸಲಾಗುವುದು. ಸರಕಾರಿ ಇಲಾಖೆಗಳಿಂದ ಇಂಧನ ಇಲಾಖೆಗೆ ಸುಮಾರು 6 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿಯಾಗಲು ಬಾಕಿ ಇದೆ ಎಂದವರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು