8:09 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ನವೆಂಬರ್ ತಿಂಗಳಾಂತ್ಯಕ್ಕೆ ಸುರತ್ಕಲ್ ಟೋಲ್‌ಗೇಟ್ ತೆರವು: ಉಡುಪಿಯಲ್ಲಿ ಸಚಿವ ಸುನಿಲ್ ಕುಮಾರ್

22/10/2022, 15:44

ಉಡುಪಿ(reporterkarnataka.com): ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ಟೋಲ್‌ ಗೇಟ್ ತೆರವು ಕಾರ್ಯ ಅಂತಿಮ ಹಂತದಲ್ಲಿದ್ದು, ನವೆಂಬರ್ ತಿಂಗಳಾಂತ್ಯಕ್ಕೆ ಟೋಲ್‌ಗೇಟ್ ತೆರವು ಮಾಡಲಾಗುವುದು.ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್ ಹೇಳಿದರು.

ಶನಿವಾರ ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು, ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ನನಗಿರುವ ಮಾಹಿತಿ ಪ್ರಕಾರ ನವೆಂಬರ್ ಅಂತ್ಯಕ್ಕೆ ತೆರವಾಗಲಿದೆ ಎಂದರು.

ಮಾಜಿ ಕಾರ್ಪೋರೇಟರ್ , ಕಾಂಗ್ರೆಸ್ ಮುಖಂಡೆ
ಪ್ರತಿಭಾ ಕುಳಾಯಿ ವಿರುದ್ದ ಅಶ್ಲೀಲ ಟ್ರೋಲ್ ಕುರಿತು ಕೇಳಲಾದ ಪ್ರಶ್ನೆಗೆ ಸಚಿವರು, ‘ನೋ ಕಮೆಂಟ್ಸ್’ ಎಂದು ನುಣುಚಿಕೊಂಡರು.

ಕಲ್ಲಿದ್ದಲು ಮತ್ತು ಕಚ್ಚಾ ವಸ್ತುಗಳ ದರಕ್ಕನುಗುಣವಾಗಿ ವಿದ್ಯುತ್ ದರ ಪರಿಷ್ಕರಣೆಯಾಗುತ್ತದೆ. ವರ್ಷದಲ್ಲಿ ಒಮ್ಮೆ ಮಾತ್ರ ವಿದ್ಯುತ್ ದರ ಪರಿಷ್ಕರಿಸುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿದ್ದೇನೆ. ಪ್ರಿಪೇಯ್ಡ್‌ ಮೀಟರ್‌ಗಳನ್ನು ಮೊದಲು ಸರಕಾರಿ ಇಲಾಖೆಗಳಲ್ಲಿ ಅಳವಡಿಸಲಾಗುವುದು. ಸರಕಾರಿ ಇಲಾಖೆಗಳಿಂದ ಇಂಧನ ಇಲಾಖೆಗೆ ಸುಮಾರು 6 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿಯಾಗಲು ಬಾಕಿ ಇದೆ ಎಂದವರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು