9:20 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಖರ್ಗೆ ಎಐಸಿಸಿ ಅಧ್ಯಕ್ಷರಾದರೂ ಆಡಳಿತ ಗಾಂಧಿ ಕುಟುಂಬದಿಂದಲೇ: ಸಚಿವ ಸುನಿಲ್ ಕುಮಾರ್

23/10/2022, 12:01

ಉಡುಪಿ(reporterkarnataka.com):
ಕಾಂಗ್ರೆಸ್ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ತಡವಾಗಿ ಎಚ್ಚೆತ್ತುಕೊಂಡಿದ್ದು, ಗಾಂಧಿ ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರುವುದಕ್ಕೆ ಆಗಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ‌ ಅಧ್ಯಕ್ಷರಾಗಿದ್ದರೂ, ಪಕ್ಷದ ಆಡಳಿತ ಮತ್ತು ನಿರ್ವಹಣೆ ಗಾಂಧಿ ಕುಟುಂಬದಿಂದಲೇ ನಡೆಯುತ್ತದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಲೇವಡಿ ಮಾಡಿದರು
ಉಡುಪಿ ಪತ್ರಿಕಾಭವನದಲ್ಲಿ ನಡೆದ ಸುದ್ದಿಗಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಮುಖಂಡ ಶಶಿ ತರೂರ್ ಎಐಸಿಸಿ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ. 75 ವರ್ಷಗಳಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ನಲ್ಲಿ ಮತದಾರರ ಪಟ್ಟಿ ಸಿದ್ದವಾಗಿದೆ ಎಂದರು.
ಬಿಜೆಪಿಯಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಬೂತ್ ಮಟ್ಟದಿಂದ ರಾಷ್ಟ್ರೀಯ ಅಧ್ಯಕ್ಷರವರೆಗೂ ಬದಲಾವಣೆ ಮಾಡಲಾಗುತ್ತದೆ. ಬಿಜೆಪಿಯಲ್ಲಿಯೂ ನಾಮಪತ್ರ ಸಲ್ಲಿಸಿಯೇ ಅಧ್ಯಕ್ಷರ ಆಯ್ಕೆಯಾಗುತ್ತದೆ. ಪಕ್ಷದ ಆಂತರಿಕ ವ್ಯವಸ್ಥೆಯಲ್ಲಿಯೂ 33% ಮಹಿಳೆಯರಿಗೆ ಮೀಸಲಾತಿ ಇದೆ ಎಂದು ಹೇಳಿದರು
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ನೀಡಿರುವ ಭಗವದ್ಗೀತೆಯಲ್ಲಿ ಜಿಹಾದ್ ಭೋದಿಸಲಾಗಿದೆ ಎಂಬ ಹೇಳಿಕೆಯನ್ನು ಖಂಡಿಸಿದ ಸಚಿವರು, ಈ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುತ್ತದೆಯೇ..? ತನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಶಿವರಾಜ್ ಪಾಟೀಲ್ ಮೂಲಕ ಹೇಳಿಸಿದೆಯೇ..? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು