12:23 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸಮಸ್ಯೆ ಹೇಳಲು ಹೋದ ಮಹಿಳೆಯ ಕೆನ್ನೆಗೆ ಬಾರಿಸಿದ ವಸತಿ ಸಚಿವ ಸೋಮಣ್ಣ: ವೀಡಿಯೊ ವೈರಲ್

23/10/2022, 12:13

ಚಾಮರಾಜನಗರ(reporterkarnataka.com): ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರ ಕೆನ್ನೆಗೆ ವಸತಿ ಮತ್ತು ಮೂಲ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೊಡೆದ ಘಟನೆ ನಡೆದಿದ್ದು, ಹೊಸ ವಿವಾದಕ್ಕೆ ಕಾರಣವಾಗಿದೆ.

ಗುಂಡ್ಲುಪೇಟೆ ತಾಲೂಕಿನ ಹಂಗಳದಲ್ಲಿ ನಡೆದ ಹಕ್ಕುಪತ್ರ ವಿತರಣೆ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಸಚಿವರು ಕೆಂಪಮ್ಮ ಎಂಬ ಮಹಿಳೆಯ ಕೆನ್ನೆಗೆ ಹೊಡೆಯುವ ದೃಶ್ಯ ರೆಕಾರ್ಡ್ ಆಗಿದ್ದು, ಇದೀಗ ವೈರಲ್ ಆಗುತ್ತಿದೆ.


ಹಂಗಳ ಗ್ರಾಮ ಪಂಚಾತಿಯ 173 ಮಂದಿ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಫಲಾನುಭವಿಗಳ ಆಯ್ಕೆ ಸರಿಯಾಗಿ ನಡೆದಿಲ್ಲ. ನಿವೇಶನ ಇದ್ದವರಿಗೆ ಮತ್ತೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಕೆಲವು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿ ಹೋಗಿ ಸಮಸ್ಯೆ ಹೇಳಿದಾಗ ಸೋಮಣ್ಣ ಕೆನ್ನೆಗೆ ಬಾರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು