5:11 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಸಚಿವರ ಹೇಳಿಕೆ ವಂಚನೆಯ ಹೊಸ ವರಸೆ: ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ

23/10/2022, 14:17

ಮಂಗಳೂರು(reporterkarnataka.com); ಸಂಸದ ನಳಿನ್ ಕುಮಾರ್ 20 ದಿನಗಳ ಕಾಲಾವಧಿ ನೀಡುವಂತೆ ಜನತೆಯ ಮುಂದೆ ಕೈ ಮುಗಿದಿದ್ದರೆ, ವಾರದ ತರುವಾಯ ಈಗ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಟೋಲ್ ತೆರವು ನವಂಬರ್ ಅಂತ್ಯಕ್ಕೆ ಎಂಬ ಹೊಸ ಹೇಳಿಕೆಯ ಮೂಲಕ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನತೆಗೆ ಮತ್ತೊಂದು ಆಘಾತ ನೀಡಿದ್ದಾರೆ.

ಈವರಗೆ ಟೋಲ್ ಸುಲಿಗೆಯ ಕುರಿತು ಒಂದು ಶಬ್ದವನ್ನೂ ಮಾತಾಡದಿರುವ ಸುನಿಲ್ ಕುಮಾರ್ ಈಗ 40 ದಿನಗಳ ಕಾಲಾವಧಿಯ ಹೇಳಿಕೆಯೊಂದಿಗೆ ರಂಗಪ್ರವೇಶಿಸಿರುವುದು ಬಿಜೆಪಿ ಸರಕಾರದ ವಂಚನೆಯ ಹೊಸ ವರಸೆಯಲ್ಲದೆ ಮತ್ತೇನಲ್ಲ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಬಣ್ಣಿಸಿದೆ.

ಈ ರೀತಿಯ ಕಾಲಮಿತಿಗಳು 6 ವರ್ಷಗಳಿಂದ ಹಲವು ಬಾರಿ ಪುನರಾವರ್ತನೆಗೊಂಡಿದೆ. ತುಳುನಾಡಿನ ಜನತೆ ಇಂತಹ ಹೇಳಿಕೆಗಳ ಕುರಿತು ಯಾವುದೆ ನಂಬಿಕೆ ಹೊಂದಿಲ್ಲ. ಅಕ್ಟೋಬರ್ 17 ರಂದು 20 ದಿನಗಳ ಕಾಲಾವಧಿ ಕೊಡುವಂತೆ ಸಂಸದ ನಳಿನ್ ಕುಮಾರ್ ಕೈ ಮುಗಿದು ಬೇಡಿಕೊಂಡಾಗ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಎಲ್ಲಿದ್ದರು ? ಟೋಲ್ ಗೇಟ್ ಮುತ್ತಿಗೆ ಸಂದರ್ಭ ಇಡೀ ತುಳುನಾಡು ಒಂದಾಗಿ ಟೋಲ್ ಗೇಟ್ ಮುಚ್ಚಲು ಆಗ್ರಹಿಸುತ್ತಿದ್ದಾಗ ಉಸ್ತುವಾರಿ ಸಚಿವರ ಜವಾಬ್ದಾರಿ ಮರೆತು ಕಾಣೆಯಾಗಿದ್ದ ಸುನಿಲ್ ಕುಮಾರ್ ಈಗ ದಿನ ಮುಂದೂಡುವ ಹೊಸ ಆಟದೊಂದಿಗೆ ರಂಗಕ್ಕಿಳಿದಿರುವುದರ ಮರ್ಮ ಸಣ್ಣ ಮಕ್ಕಳಿಗೂ ಅರ್ಥವಾಗುತ್ತದೆ. ಬಿಜೆಪಿ ಸಂಸದ, ಶಾಸಕರುಗಳ ಇಂತಹ ಹಳಸಲು ಸುಳ್ಳುಗಳನ್ನು ನಂಬುವವರು ಈ ಜಿಲ್ಲೆಗಳಲ್ಲಿ ಈಗ ಯಾರೂ ಇಲ್ಲ ಎಂದು ಹೋರಾಟ ಸಮಿತಿ ತಿರುಗೇಟು ನೀಡಿದೆ‌.

ಹೋರಾಟವನ್ನು ಕೈ ಬಿಟ್ಟರೆ ಟೋಲ್ ತೆರವು ಪ್ರಸ್ಥಾಪವನ್ನೆ ಬಿಜೆಪಿ ಸರಕಾರ ಕೈ ಬಿಡುತ್ತದೆ. ಜನತೆಯ ಒಗ್ಗಟ್ಟಿನ ಹೋರಾಟ ಮಾತ್ರ ಸುರತ್ಕಲ್ ಟೋಲ್ ಗೇಟ್ ಅನ್ನು ತೆರವುಗೊಳಿಸಬಲ್ಲದು. ಬಿಜೆಪಿ ಸಂಸದ, ಶಾಸಕರ‌ನ್ನು ನಂಬಿದರೆ ಟೋಲ್ ಸುಲಿಗೆ ಶಾಶ್ವತವಾಗಲಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಮಾತುಕೊಟ್ಟಂತೆ ಕಾಲಮಿತಿಯಲ್ಲಿ ಟೋಲ್ ತೆರವುಗೊಳಿಸುವಂತೆ ಒತ್ತಾಯಿಸಿ ಅಕ್ಟೋಬರ್ 28ರಿಂದ ನಡೆಯಲಿರುವ ಹಗಲು ರಾತ್ರಿ ಸಾಮೂಹಿಕ ಧರಣಿಯನ್ನು ಜನತೆ ವ್ಯಾಪಕವಾಗಿ ಬೆಂಬಲಿಸುವ ಮೂಲಕ ಟೋಲ್ ಗೇಟ್ ತೆರವು ಹೋರಾಟಕ್ಕೆ ಬಲ ತುಂಬಬೇಕು ಎಂದು ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು