12:44 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಸಚಿವರ ಹೇಳಿಕೆ ವಂಚನೆಯ ಹೊಸ ವರಸೆ: ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ

23/10/2022, 14:17

ಮಂಗಳೂರು(reporterkarnataka.com); ಸಂಸದ ನಳಿನ್ ಕುಮಾರ್ 20 ದಿನಗಳ ಕಾಲಾವಧಿ ನೀಡುವಂತೆ ಜನತೆಯ ಮುಂದೆ ಕೈ ಮುಗಿದಿದ್ದರೆ, ವಾರದ ತರುವಾಯ ಈಗ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಟೋಲ್ ತೆರವು ನವಂಬರ್ ಅಂತ್ಯಕ್ಕೆ ಎಂಬ ಹೊಸ ಹೇಳಿಕೆಯ ಮೂಲಕ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನತೆಗೆ ಮತ್ತೊಂದು ಆಘಾತ ನೀಡಿದ್ದಾರೆ.

ಈವರಗೆ ಟೋಲ್ ಸುಲಿಗೆಯ ಕುರಿತು ಒಂದು ಶಬ್ದವನ್ನೂ ಮಾತಾಡದಿರುವ ಸುನಿಲ್ ಕುಮಾರ್ ಈಗ 40 ದಿನಗಳ ಕಾಲಾವಧಿಯ ಹೇಳಿಕೆಯೊಂದಿಗೆ ರಂಗಪ್ರವೇಶಿಸಿರುವುದು ಬಿಜೆಪಿ ಸರಕಾರದ ವಂಚನೆಯ ಹೊಸ ವರಸೆಯಲ್ಲದೆ ಮತ್ತೇನಲ್ಲ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಬಣ್ಣಿಸಿದೆ.

ಈ ರೀತಿಯ ಕಾಲಮಿತಿಗಳು 6 ವರ್ಷಗಳಿಂದ ಹಲವು ಬಾರಿ ಪುನರಾವರ್ತನೆಗೊಂಡಿದೆ. ತುಳುನಾಡಿನ ಜನತೆ ಇಂತಹ ಹೇಳಿಕೆಗಳ ಕುರಿತು ಯಾವುದೆ ನಂಬಿಕೆ ಹೊಂದಿಲ್ಲ. ಅಕ್ಟೋಬರ್ 17 ರಂದು 20 ದಿನಗಳ ಕಾಲಾವಧಿ ಕೊಡುವಂತೆ ಸಂಸದ ನಳಿನ್ ಕುಮಾರ್ ಕೈ ಮುಗಿದು ಬೇಡಿಕೊಂಡಾಗ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಎಲ್ಲಿದ್ದರು ? ಟೋಲ್ ಗೇಟ್ ಮುತ್ತಿಗೆ ಸಂದರ್ಭ ಇಡೀ ತುಳುನಾಡು ಒಂದಾಗಿ ಟೋಲ್ ಗೇಟ್ ಮುಚ್ಚಲು ಆಗ್ರಹಿಸುತ್ತಿದ್ದಾಗ ಉಸ್ತುವಾರಿ ಸಚಿವರ ಜವಾಬ್ದಾರಿ ಮರೆತು ಕಾಣೆಯಾಗಿದ್ದ ಸುನಿಲ್ ಕುಮಾರ್ ಈಗ ದಿನ ಮುಂದೂಡುವ ಹೊಸ ಆಟದೊಂದಿಗೆ ರಂಗಕ್ಕಿಳಿದಿರುವುದರ ಮರ್ಮ ಸಣ್ಣ ಮಕ್ಕಳಿಗೂ ಅರ್ಥವಾಗುತ್ತದೆ. ಬಿಜೆಪಿ ಸಂಸದ, ಶಾಸಕರುಗಳ ಇಂತಹ ಹಳಸಲು ಸುಳ್ಳುಗಳನ್ನು ನಂಬುವವರು ಈ ಜಿಲ್ಲೆಗಳಲ್ಲಿ ಈಗ ಯಾರೂ ಇಲ್ಲ ಎಂದು ಹೋರಾಟ ಸಮಿತಿ ತಿರುಗೇಟು ನೀಡಿದೆ‌.

ಹೋರಾಟವನ್ನು ಕೈ ಬಿಟ್ಟರೆ ಟೋಲ್ ತೆರವು ಪ್ರಸ್ಥಾಪವನ್ನೆ ಬಿಜೆಪಿ ಸರಕಾರ ಕೈ ಬಿಡುತ್ತದೆ. ಜನತೆಯ ಒಗ್ಗಟ್ಟಿನ ಹೋರಾಟ ಮಾತ್ರ ಸುರತ್ಕಲ್ ಟೋಲ್ ಗೇಟ್ ಅನ್ನು ತೆರವುಗೊಳಿಸಬಲ್ಲದು. ಬಿಜೆಪಿ ಸಂಸದ, ಶಾಸಕರ‌ನ್ನು ನಂಬಿದರೆ ಟೋಲ್ ಸುಲಿಗೆ ಶಾಶ್ವತವಾಗಲಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಮಾತುಕೊಟ್ಟಂತೆ ಕಾಲಮಿತಿಯಲ್ಲಿ ಟೋಲ್ ತೆರವುಗೊಳಿಸುವಂತೆ ಒತ್ತಾಯಿಸಿ ಅಕ್ಟೋಬರ್ 28ರಿಂದ ನಡೆಯಲಿರುವ ಹಗಲು ರಾತ್ರಿ ಸಾಮೂಹಿಕ ಧರಣಿಯನ್ನು ಜನತೆ ವ್ಯಾಪಕವಾಗಿ ಬೆಂಬಲಿಸುವ ಮೂಲಕ ಟೋಲ್ ಗೇಟ್ ತೆರವು ಹೋರಾಟಕ್ಕೆ ಬಲ ತುಂಬಬೇಕು ಎಂದು ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು