11:51 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಕೋವಿಡ್  ಲಸಿಕೆ ಅಭಿಯಾನಕ್ಕೆ  ಚಾಲನೆ; 600 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್

30/06/2021, 22:34

ಮಂಗಳೂರು (reporterkarnataka): ದ.ಕ. ಜಿಲ್ಲಾಡಳಿತ ಹಾಗೂ ರಾ.ಸೇ.ಯೋ ಸಹಭಾಗಿತ್ವದಲ್ಲಿ ಉಚಿತ ಲಸಿಕಾ  ಅಭಿಯಾನವು ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ  ಬುಧವಾರ ಕಾಲೇಜಿನಲ್ಲಿ ಜರುಗಿತು.

 ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ  ಡಾ. ಧನಶ್ರೀ  ಅಭಿಯಾನವನ್ನು ಉದ್ಘಾಟಿಸಿದರು. ಕೆನರಾ ಸಮೂಹ ಸಂಸ್ಥೆಗಳ ಖಜಾಂಜಿ ಸಿ.ಎ. ಶ್ರೀ ಎಂ. ವಾಮನ ಕಾಮತ್, ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ., ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅನಿಲಾ, ಕೆನರಾ ಸಮೂಹ ಸಂಸ್ಥೆಯ ಶ್ರೀ ಗುರುದತ್ತ ಭಾಗವತ್, ಐಕ್ಯೂಎಸಿ ಸಂಯೋಜಕಿ ದೇಜಮ್ಮ ಎ., ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೀಮಾ ಪ್ರಭು ಎಸ್.  ಮುಂತಾದವರು ಉಪಸ್ಥಿತರಿದ್ದರು. ಸುಮಾರು 600 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ೧೯ ಲಸಿಕೆ ನೀಡಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ನ ಘಟಕ  ಹಾಗೂ ರಾ.ಸೇ.ಯೋ ಸ್ವಯಂ ಸೇವಕರು ಅಭಿಯಾನಕ್ಕೆ  ಸಹಕಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು