10:31 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಕೋವಿಡ್  ಲಸಿಕೆ ಅಭಿಯಾನಕ್ಕೆ  ಚಾಲನೆ; 600 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್

30/06/2021, 22:34

ಮಂಗಳೂರು (reporterkarnataka): ದ.ಕ. ಜಿಲ್ಲಾಡಳಿತ ಹಾಗೂ ರಾ.ಸೇ.ಯೋ ಸಹಭಾಗಿತ್ವದಲ್ಲಿ ಉಚಿತ ಲಸಿಕಾ  ಅಭಿಯಾನವು ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ  ಬುಧವಾರ ಕಾಲೇಜಿನಲ್ಲಿ ಜರುಗಿತು.

 ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ  ಡಾ. ಧನಶ್ರೀ  ಅಭಿಯಾನವನ್ನು ಉದ್ಘಾಟಿಸಿದರು. ಕೆನರಾ ಸಮೂಹ ಸಂಸ್ಥೆಗಳ ಖಜಾಂಜಿ ಸಿ.ಎ. ಶ್ರೀ ಎಂ. ವಾಮನ ಕಾಮತ್, ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ., ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅನಿಲಾ, ಕೆನರಾ ಸಮೂಹ ಸಂಸ್ಥೆಯ ಶ್ರೀ ಗುರುದತ್ತ ಭಾಗವತ್, ಐಕ್ಯೂಎಸಿ ಸಂಯೋಜಕಿ ದೇಜಮ್ಮ ಎ., ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೀಮಾ ಪ್ರಭು ಎಸ್.  ಮುಂತಾದವರು ಉಪಸ್ಥಿತರಿದ್ದರು. ಸುಮಾರು 600 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ೧೯ ಲಸಿಕೆ ನೀಡಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ನ ಘಟಕ  ಹಾಗೂ ರಾ.ಸೇ.ಯೋ ಸ್ವಯಂ ಸೇವಕರು ಅಭಿಯಾನಕ್ಕೆ  ಸಹಕಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು