4:08 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾಣಿಯೂರು ಘಟನೆ ಸರಕಾರ, ಪೊಲೀಸರ ವೈಫಲ್ಯಕ್ಕೆ ನಿದರ್ಶನ: ಮಾಜಿ ಶಾಸಕ ಜೆ.ಆರ್. ಲೋಬೋ

25/10/2022, 11:26

ಮಂಗಳೂರು(reporterkarnataka.com): ಕಾಣಿಯೂರು ಬಳಿ ಹೊಟ್ಟೆ ಪಾಡಿಗೆ ಬಟ್ಟೆ ವ್ಯಾಪಾರ ಮಾಡುವ ಇಬ್ಬರು ಮುಸ್ಲಿಮ್ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಸರಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ. ಪೊಲೀಸರು ಜನರನ್ನು ಕಾಪಾಡಲು ಇರುವವರು. ಅವರು ಕಾನೂನು ಪಾಲನೆಗಿಂತ ಆಳುವವರ ಕೈಗೊಂಬೆ ಆಗಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಜೆ. ಆರ್. ಲೋಬೋ ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೇನೆ. ಇದು ಅನೈತಿಕ, ಕಾನೂನು ಬಾಹಿರ ಎಂದು ಹೇಳಿದರು.

ಇತ್ತೀಚೆಗೆ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಟೋಲ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದರು. ಇದಕ್ಕಾಗಿ ಅವರನ್ನು ಗುರಿಯಾಗಿಸಿ ಅವರ ವಿರುದ್ಧ ಅಸಹ್ಯ ಪ್ರಚಾರ ಮಾಡಲಾಗಿದೆ. ಚಾನೆಲ್ ಗಳೂ ಈ ಅಸಹ್ಯ ಕೆಲಸ ಮಾಡಿವೆ. ಕಾಣಿಯೂರು ಬಳಿ ಹಲ್ಲೆ ಮತ್ತು ಪ್ರತಿಭಾ ಕುಳಾಯಿ ಮೇಲೆ ನಡೆದ ಅನೈತಿಕ ಪ್ರಚಾರಕ್ಕೆ ಕೆಲವರ ದ್ವೇಷ ಭಾಷಣಗಳೇ ಕಾರಣ.ಎಂದು ಲೋಬೋ ನುಡಿದರು.

ಚಿರತೆ ಬಸಿರಾದಂತಹ ಕಾರ್ಟೂನ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಕ್ಕೆ ಹೋರಾಟಗಾರರೊಬ್ಬರನ್ನು ಬಂಧಿಸಿರುವುದು ಏನನ್ನು ಸೂಚಿಸುತ್ತದೆ. ಕಾನೂನು ಮುರಿಯುವ ಎಲ್ಲರ ಮೇಲೆ ಕೆಲಸ ಕ್ರಮ ತೆಗೆದುಕೊಳ್ಳಿ. ಪೊಲೀಸರು ಜನರಿಗೆ ನ್ಯಾಯ ದೊರಕಿಸಲಿ. ಸಂವಿಧಾನದ ಪ್ರಕಾರ ದೇಶ ನಡೆಯಲಿ ಎಂದು ಲೋಬೋ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಶಶಿಧರ ಹೆಗ್ಡೆ ಪ್ರಕಾಶ್ ಸಾಲಿಯಾನ್, ಚಂದ್ರಕಲಾ, ಶಾಂತಲಾ ಗಟ್ಟಿ, ಹಮೀದ್, ಅಶ್ರಫ್, ಟಿ. ಕೆ. ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು