12:25 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕಾಣಿಯೂರು ಘಟನೆ ಸರಕಾರ, ಪೊಲೀಸರ ವೈಫಲ್ಯಕ್ಕೆ ನಿದರ್ಶನ: ಮಾಜಿ ಶಾಸಕ ಜೆ.ಆರ್. ಲೋಬೋ

25/10/2022, 11:26

ಮಂಗಳೂರು(reporterkarnataka.com): ಕಾಣಿಯೂರು ಬಳಿ ಹೊಟ್ಟೆ ಪಾಡಿಗೆ ಬಟ್ಟೆ ವ್ಯಾಪಾರ ಮಾಡುವ ಇಬ್ಬರು ಮುಸ್ಲಿಮ್ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಸರಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ. ಪೊಲೀಸರು ಜನರನ್ನು ಕಾಪಾಡಲು ಇರುವವರು. ಅವರು ಕಾನೂನು ಪಾಲನೆಗಿಂತ ಆಳುವವರ ಕೈಗೊಂಬೆ ಆಗಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಜೆ. ಆರ್. ಲೋಬೋ ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೇನೆ. ಇದು ಅನೈತಿಕ, ಕಾನೂನು ಬಾಹಿರ ಎಂದು ಹೇಳಿದರು.

ಇತ್ತೀಚೆಗೆ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಟೋಲ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದರು. ಇದಕ್ಕಾಗಿ ಅವರನ್ನು ಗುರಿಯಾಗಿಸಿ ಅವರ ವಿರುದ್ಧ ಅಸಹ್ಯ ಪ್ರಚಾರ ಮಾಡಲಾಗಿದೆ. ಚಾನೆಲ್ ಗಳೂ ಈ ಅಸಹ್ಯ ಕೆಲಸ ಮಾಡಿವೆ. ಕಾಣಿಯೂರು ಬಳಿ ಹಲ್ಲೆ ಮತ್ತು ಪ್ರತಿಭಾ ಕುಳಾಯಿ ಮೇಲೆ ನಡೆದ ಅನೈತಿಕ ಪ್ರಚಾರಕ್ಕೆ ಕೆಲವರ ದ್ವೇಷ ಭಾಷಣಗಳೇ ಕಾರಣ.ಎಂದು ಲೋಬೋ ನುಡಿದರು.

ಚಿರತೆ ಬಸಿರಾದಂತಹ ಕಾರ್ಟೂನ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಕ್ಕೆ ಹೋರಾಟಗಾರರೊಬ್ಬರನ್ನು ಬಂಧಿಸಿರುವುದು ಏನನ್ನು ಸೂಚಿಸುತ್ತದೆ. ಕಾನೂನು ಮುರಿಯುವ ಎಲ್ಲರ ಮೇಲೆ ಕೆಲಸ ಕ್ರಮ ತೆಗೆದುಕೊಳ್ಳಿ. ಪೊಲೀಸರು ಜನರಿಗೆ ನ್ಯಾಯ ದೊರಕಿಸಲಿ. ಸಂವಿಧಾನದ ಪ್ರಕಾರ ದೇಶ ನಡೆಯಲಿ ಎಂದು ಲೋಬೋ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಶಶಿಧರ ಹೆಗ್ಡೆ ಪ್ರಕಾಶ್ ಸಾಲಿಯಾನ್, ಚಂದ್ರಕಲಾ, ಶಾಂತಲಾ ಗಟ್ಟಿ, ಹಮೀದ್, ಅಶ್ರಫ್, ಟಿ. ಕೆ. ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು