1:10 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಡ್ರೈವಿಂಗ್ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತಕ್ಕೆ ಬಲಿ: ಕೆಎಸ್ಸಾರ್ಟಿಸಿ ಬಸ್ ಪಲ್ಟಿ 14 ಮಂದಿಗೆ ಗಾಯ

25/10/2022, 18:26

ರಾಯಚೂರು(reporterkarnataka.com):ಡ್ರೈವಿಂಗ್ ಮಾಡುತ್ತಿರುವಾಗಲೇ ಕೆಎಸ್ಸಾರ್ಟಿಸಿ ಬಸ್ ಚಾಲಕರೊಬ್ಬರು ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದು, ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ಚಿಕ್ಕಹೆಸರೂರು ಎಂಬಲ್ಲಿ ನಡೆದಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಚಾಲಕ ರಾಯಚೂರು ವಿಭಾಗದ ಲಿಂಗಸೂಗುರ ಘಟಕದ ಚಾಲಕ ಶ್ರೀನಿವಾಸ್ ನಾರಾಯಣ ಗೌಡ (52) ಮೃತಪಟ್ಟ ಚಾಲಕರು.

ಸೋಮವಾರ ಸಂಜೆ ಬಸ್‌ ರಾಯಚೂರು-ಲಿಂಗಸೂಗುರ ಮಾರ್ಗವಾಗಿ ಬೆಳಗಾವಿಗೆ ಸಂಚರಿಸುತ್ತಿದ್ದ ವೇಳೆ ಮಾರ್ಗಮಧ್ಯದಲ್ಲಿ ಚಾಲಕನಿಗೆ ಹೃದಯಾಘಾತವಾಗಿದೆ. ಚಾಲಕ ಅಸ್ವಸ್ಥಗೊಂಡ ಕಾರಣ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ.ಅಪಘಾತದಲ್ಲಿ ನಿರ್ವಾಹಕ ಸೇರಿದಂತೆ 14 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇವರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯಗೊಂಡಿದ್ದು, ಲಿಂಗಸೂಗೂರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು 31 ಮಂದಿ ಪ್ರಯಾಣಿಕರನ್ನು ಹೊತ್ತು ರಾಜಹಂಸ ಬಸ್ ರಾಯಚೂರಿನಿಂದ ಬೆಳಗಾವಿ ಕಡೆ ಸಂಚರಿಸುತ್ತಿತ್ತು. ಇದಕ್ಕಿದ್ದಂತೆ ಬಸ್ ಚಾಲಕನಿಗೆ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಬಳಲಿದ ಚಾಲಕ ಬಸ್ ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲೇ ಚಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಪರಿಣಾಮ ಬಸ್ ಅಪಘಾತಕ್ಕೀಡಾಗಿದೆ. ಬಸ್ ರಾಯಚೂರಿನಿಂದ ಸುಮಾರು 90 ಕಿಲೋಮೀಟರ್ ದೂರ ಪ್ರಯಾಣಿಸಿದೆ. ಈ ವೇಳೆ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು