8:36 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಡ್ರೈವಿಂಗ್ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತಕ್ಕೆ ಬಲಿ: ಕೆಎಸ್ಸಾರ್ಟಿಸಿ ಬಸ್ ಪಲ್ಟಿ 14 ಮಂದಿಗೆ ಗಾಯ

25/10/2022, 18:26

ರಾಯಚೂರು(reporterkarnataka.com):ಡ್ರೈವಿಂಗ್ ಮಾಡುತ್ತಿರುವಾಗಲೇ ಕೆಎಸ್ಸಾರ್ಟಿಸಿ ಬಸ್ ಚಾಲಕರೊಬ್ಬರು ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದು, ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ಚಿಕ್ಕಹೆಸರೂರು ಎಂಬಲ್ಲಿ ನಡೆದಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಚಾಲಕ ರಾಯಚೂರು ವಿಭಾಗದ ಲಿಂಗಸೂಗುರ ಘಟಕದ ಚಾಲಕ ಶ್ರೀನಿವಾಸ್ ನಾರಾಯಣ ಗೌಡ (52) ಮೃತಪಟ್ಟ ಚಾಲಕರು.

ಸೋಮವಾರ ಸಂಜೆ ಬಸ್‌ ರಾಯಚೂರು-ಲಿಂಗಸೂಗುರ ಮಾರ್ಗವಾಗಿ ಬೆಳಗಾವಿಗೆ ಸಂಚರಿಸುತ್ತಿದ್ದ ವೇಳೆ ಮಾರ್ಗಮಧ್ಯದಲ್ಲಿ ಚಾಲಕನಿಗೆ ಹೃದಯಾಘಾತವಾಗಿದೆ. ಚಾಲಕ ಅಸ್ವಸ್ಥಗೊಂಡ ಕಾರಣ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ.ಅಪಘಾತದಲ್ಲಿ ನಿರ್ವಾಹಕ ಸೇರಿದಂತೆ 14 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇವರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯಗೊಂಡಿದ್ದು, ಲಿಂಗಸೂಗೂರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು 31 ಮಂದಿ ಪ್ರಯಾಣಿಕರನ್ನು ಹೊತ್ತು ರಾಜಹಂಸ ಬಸ್ ರಾಯಚೂರಿನಿಂದ ಬೆಳಗಾವಿ ಕಡೆ ಸಂಚರಿಸುತ್ತಿತ್ತು. ಇದಕ್ಕಿದ್ದಂತೆ ಬಸ್ ಚಾಲಕನಿಗೆ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಬಳಲಿದ ಚಾಲಕ ಬಸ್ ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲೇ ಚಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಪರಿಣಾಮ ಬಸ್ ಅಪಘಾತಕ್ಕೀಡಾಗಿದೆ. ಬಸ್ ರಾಯಚೂರಿನಿಂದ ಸುಮಾರು 90 ಕಿಲೋಮೀಟರ್ ದೂರ ಪ್ರಯಾಣಿಸಿದೆ. ಈ ವೇಳೆ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು