5:49 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ತಲೆನೋವು: ಮಂಚಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ಆಕಸ್ಮಿಕ ಸಾವು

25/10/2022, 18:38

ಬಂಟ್ವಾಳ(reporterkarnataka.com): ತಲೆ ನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಚಿಯಲ್ಲಿ ನಡೆದಿದೆ.

ಮಂಚಿ ಸಮೀಪದ ನಿವಾಸಿ ರತಿ ಎಂಬವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಭವ್ಯಾ ವಿದ್ಯಾಭ್ಯಾಸ ಮಾಡುತ್ತಿದ್ದರು. ತಲೆನೋವಿಗೆ ಇತ್ತೀಚೆಗೆ ಸ್ಥಳೀಯ ವೈದ್ಯರಲ್ಲಿ ಔಷಧಿ ಪಡೆದಿದ್ದಳು. ಸೋಮವಾರ ರಾತ್ರಿ ಸುಮಾರು 7 ಗಂಟೆ ವೇಳೆ ತಲೆ ನೋವು ಕಾಣಿಸಿಕೊಂಡು ವಾಂತಿ‌ ಮಾಡಿದ್ದಳು.

ರಾತ್ರಿ ವೇಳೆ ತಲೆ ನೋವು ಜಾಸ್ತಿಯಾಗಿ ಮತ್ತೆ ವಾಂತಿ ಮಾಡಿದ್ದಳು. ನಂತರ ಮುಂಜಾನೆ ವೇಳೆಗೆ ಭವ್ಯಾಳನ್ನು ಬಂಟ್ವಾಳ ಸರಕಾರಿ ‌ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ವೈದ್ಯರು‌ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು.

ವೆನ್ಲಾಕ್ ಗೆ ಅಂಬ್ಯುಲೆನ್ಸ್ ನಲ್ಲಿ ಸಾಗಿಸುವ ದಾರಿ ಮಧ್ಯೆ ಭವ್ಯಾ ಮೃತಪಟ್ಟಿದ್ದಾರೆ.ಇದೀಗ ಭವ್ಯಾ ಮರಣೋತ್ತರ ಪರೀಕ್ಷೆ ನಡೆದಿದೆ

ಇತ್ತೀಚಿನ ಸುದ್ದಿ

ಜಾಹೀರಾತು