3:01 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಇತ್ತೀಚಿನ ಸುದ್ದಿ

ತಲೆನೋವು: ಮಂಚಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ಆಕಸ್ಮಿಕ ಸಾವು

25/10/2022, 18:38

ಬಂಟ್ವಾಳ(reporterkarnataka.com): ತಲೆ ನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಚಿಯಲ್ಲಿ ನಡೆದಿದೆ.

ಮಂಚಿ ಸಮೀಪದ ನಿವಾಸಿ ರತಿ ಎಂಬವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಭವ್ಯಾ ವಿದ್ಯಾಭ್ಯಾಸ ಮಾಡುತ್ತಿದ್ದರು. ತಲೆನೋವಿಗೆ ಇತ್ತೀಚೆಗೆ ಸ್ಥಳೀಯ ವೈದ್ಯರಲ್ಲಿ ಔಷಧಿ ಪಡೆದಿದ್ದಳು. ಸೋಮವಾರ ರಾತ್ರಿ ಸುಮಾರು 7 ಗಂಟೆ ವೇಳೆ ತಲೆ ನೋವು ಕಾಣಿಸಿಕೊಂಡು ವಾಂತಿ‌ ಮಾಡಿದ್ದಳು.

ರಾತ್ರಿ ವೇಳೆ ತಲೆ ನೋವು ಜಾಸ್ತಿಯಾಗಿ ಮತ್ತೆ ವಾಂತಿ ಮಾಡಿದ್ದಳು. ನಂತರ ಮುಂಜಾನೆ ವೇಳೆಗೆ ಭವ್ಯಾಳನ್ನು ಬಂಟ್ವಾಳ ಸರಕಾರಿ ‌ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ವೈದ್ಯರು‌ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು.

ವೆನ್ಲಾಕ್ ಗೆ ಅಂಬ್ಯುಲೆನ್ಸ್ ನಲ್ಲಿ ಸಾಗಿಸುವ ದಾರಿ ಮಧ್ಯೆ ಭವ್ಯಾ ಮೃತಪಟ್ಟಿದ್ದಾರೆ.ಇದೀಗ ಭವ್ಯಾ ಮರಣೋತ್ತರ ಪರೀಕ್ಷೆ ನಡೆದಿದೆ

ಇತ್ತೀಚಿನ ಸುದ್ದಿ

ಜಾಹೀರಾತು