3:35 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ದೀಪಾವಳಿ ಉಡುಗೋರೆ: ವಿಕಲಚೇತನಿಗೆ ತ್ರಿಚಕ್ರ ವಾಹನ ಹಸ್ತಾಂತರಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

27/10/2022, 21:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದೀಪಾವಳಿ ಹಬ್ಬದ ಉಡುಗೊರೆಯಾಗಿ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಹಣಮಂತ ಕುರುಬರ ಎಂಬ ವಿಕಲಾಂಗ ಚೇತನ ಯುವಕನಿಗೆ ವೈಯುಕ್ತಿಕವಾಗಿ ಮಾಜಿ ಡಿಸಿಎಂ ‌ಹಾಲಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ತ್ರಿಚಕ್ರ ವಾಹನ ಹಸ್ತಾಂತರಿಸಿದರು.

ಇದೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಕಳೆದ ಎರಡು ತಿಂಗಳ ಹಿಂದೆ ಖಾಸಗಿ ಸುದ್ದಿವಾಹಿನಿ ಕಾರ್ಯಕ್ರಮ ಒಂದರಲ್ಲಿ ವಿಕಲ ಚೇತನ ಹಣಮಂತ ಕುರುಬರ ತನ್ನ ಅಳಲನ್ನ ತೋಡಿಕೊಂಡಿದ್ದನ್ನ ಮನಗಂಡು ಹಣಮಂತನಿಗೆ ತ್ರಿಚಕ್ರ ವಾಹನ ನೀಡುವ ಭರವಸೆ ನೀಡಿದ್ದೆ ಅದರಂತೆ ಇಂದು ದೀಪಾವಳಿ ಹಬ್ಬದ ಉಡುಗೊರೆಯಾಗಿ ಹಣಮಂತನಿಗೆ ತ್ರಿಚಕ್ರ ವಾಹನ ವಿತರಣೆ ಮಾಡಿದ್ದು ಸಂತಸದ ವಿಷಯ, ಇಂಥಹ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲಾ ಮುಂದಿನ ದಿನಗಳಲ್ಲಿ ನನ್ನ ಕ್ಷೇತ್ರದಲ್ಲಿ ಇರುವ ವಿಕಲ ಚೇತನರನ್ನ ಗುರುತಿಸಿ ಅವರಿಗೆ ತ್ರಿಚಕ್ರ ವಾಹನ ಕಲ್ಪಿಸುವ ಭರವಸೆ ನೀಡಿದರು.


ಯುವ ಮುಖಂಡ ಚಿದಾನಂದ ಸವದಿ, ಪುರಸಭೆ ಸದಸ್ಯರಾದ ರಾಜಶೇಖರ ಗೂಡೊಡಗಿ, ಕಲ್ಲೇಶ್ ಮಡ್ಡಿ, ನ್ಯಾಯವಾದಿ ನಿಂಗಪ್ಪಾ ಖೋಕಲೆ, ಮಾಹಾತೇಶ ಠಕ್ಕಣ್ಣವರ, ಆಸಿಫ್ ತಾಂಬೊಳಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು