11:54 PM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಪತ್ರಕರ್ತ ಗೆ ಶಾಸಕರಿಂದ ಜೀವ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ: ಕಕಾಪ ಧ್ವನಿ ಖಂಡನೆ

27/10/2022, 21:53

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪದಾಧಿಕಾರಿಗಳು, ಕೂಡ್ಲಿಗಿ ಘಟಕದ ಅಧ್ಯಕ್ಷ ಎಲೆ ನಾಗರಾಜ ನೇತೃತ್ವದಲ್ಲಿ ಇತ್ತೀಚೆಗಷ್ಟೇ ಮುದ್ದೇಬಿಹಾಳ್ ಶಾಸಕ ಎ. ಎಸ್. ಪಾಟೀಲ್ ನಡಹಳ್ಳಿ, ವರದಿಗಾರ ನಾರಾಯಣ ಮಾಯಾಚಾರಿಗೆ ಫೋನ್ ಸಂಭಾಷಣೆ ಮೂಲಕ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿದರು.

ಪತ್ರಕರ್ತರು ಮಾತನಾಡಿ, ಮುಖ್ಯಮಂತ್ರಿಗಳು ಶಾಸಕನ ರಾಜೀನಾಮೆ ಪಡೆಯಬೇಕೆಂದು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಒತ್ತಾಯಿಸಿದರು. ಅವರು ಮುಖ್ಯಮಂತ್ರಿಗಳಿಗೆ ತಮ್ಮ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ರವಾನಿಸಿದರು, ಹಕ್ಕೋತ್ತಾಯ ಪತ್ರವನ್ನು ತಹಸೀಲ್ದಾರ್ ಟಿ. ಜಗದೀಶ್ ಗೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಕಾರ್ಯಧ್ಯಕ್ಷ ಬಾಣದ ಶಿವ ಮೂರ್ತಿ, ಅನಿಲ್ ಕುಮಾರ್ ಬಿ. ರಾಘವೇಂದ್ರ. ಸೋವೇನಹಳ್ಳಿ ಈಶ್ವರಪ್ಪ, ಬಿ. ಬಸವರಾಜ್. ಮೀನು ಕೇರಿ ತಿಪ್ಪೇಸ್ವಾಮಿ, ಸಾಲು ಮನಿ ರಾಘವೇಂದ್ರ, ಜಿ. ನಾರಾಯಣ, ಬಣಕಾರ್ ಮೂಗಪ್ಪ, ಶಿವಪುರ ಮಂಜುನಾಥ ಸೇರಿದಂತೆ ಮತ್ತಿತರೆ ಪತ್ರಕರ್ತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು