12:40 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ವಲಯವಾರು ಗುರುತಿಗೆ ಅನುಕೂಲವಾಗುವಂತೆ ಆಟೋ ರಿಕ್ಷಾಗಳಿಗೆ ಬಣ್ಣ: ಜಿಲ್ಲಾಧಿಕಾರಿ ಸೂಚನೆ

28/10/2022, 20:17

ಮಂಗಳೂರು(reporterkarnataka.com):- ನಗರ ವ್ಯಾಪ್ತಿ (ವಲಯ-1) ಯ ಆಟೋರಿಕ್ಷಾ ಗಳಿಗೆ ಹಳದಿ ಮತ್ತು ಕಪ್ಪು ಹಾಗೂ ಗ್ರಾಮಾಂತರ (ವಲಯ-2) ರಲ್ಲಿ ಬರುವ ಆಟೋರಿಕ್ಷಾ ಗಳಿಗೆ ಹಸಿರು ಹಾಗೂ ಹಳದಿ ಬಣ್ಣ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚಿಸಿದ್ದಾರೆ.
ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಲಯ ಒಂದರಲ್ಲಿ ಬರುವ ಎಲ್ಲಾ ಮಾದರಿಯ ಆಟೋ ರಿಕ್ಷಾ ಗಳು ಹಳದಿ ಹಾಗೂ ಕಪ್ಪು, ವಲಯ ಎರಡರಲ್ಲಿ ಬರುವ ಎಲ್ಲಾ ಮಾದರಿಯ ಆಟೋ ರಿಕ್ಷಾಗಳು (ಎಲೆಕ್ಟ್ರಿಕಲ್, ಸಿ ಎನ್ ಜಿ ಹಾಗೂ ಡೀಸೆಲ್, ಪೆಟ್ರೋಲ್ ) ಕಡ್ಡಾಯವಾಗಿ ಹಸಿರು ಹಾಗೂ ಹಳದಿ ಬಣ್ಣವನ್ನು ಹಾಕಿಸಿಕೊಳ್ಳಬೇಕು, ಯಾವುದೇ ಕಾರಣಕ್ಕೂ ಸ್ಟಿಕ್ಕರ್ ಅಳವಡಿಸಿಕೊಳ್ಳುವಂತೆ ಇಲ್ಲ, ಬಣ್ಣ ಹಾಕಿಸಿಕೊಳ್ಳಲು ಅಗತ್ಯವಾದ ಕಾಲಾವಕಾಶ ನೀಡಲಾಗುವುದು, ಈ ಮೂಲಕ ಆಟೋ ರಿಕ್ಷಾಗಳು ತಮ್ಮ ವ್ಯಾಪ್ತಿಯನ್ನು ನಿರ್ಧರಿಸಿಕೊಳ್ಳಲು ಅನುಕೂಲವಾಗಲಿದೆ, ಆ ಮೂಲಕ ಗೊಂದಲಗಳಿಗೆ ತೆರೆ ಎಳೆಯಬಹುದಾಗಿದೆ ಎಂದು ಹೇಳಿದರು.ಆರೋಗ್ಯಕ್ಕೆ ಸಂಬಂಧಿಸಿದಂತೆ ತುರ್ತು ಸಂದರ್ಭದಲ್ಲಿ ಸೇವೆ ಸಲ್ಲಿಸುವ ಆಟೋ ರಿಕ್ಷಾಗಳು ಮಾತ್ರ ತಮ್ಮ ವ್ಯಾಪ್ತಿಯನ್ನು ಮೀರಬಹುದಾಗಿದೆ, ಇಂತಹ ಸಂದರ್ಭಗಳಲ್ಲಿ ಅಗತ್ಯ ದಾಖಲಾತಿ ಇಟ್ಟುಕೊಳ್ಳಬೇಕು, ಅದನ್ನ ಹೊರತು ಪಡಿಸಿ ತಮ್ಮ ರಹದಾರಿಯ ವ್ಯಾಪ್ತಿ ಮೀರಿದರೆ, ಸಂಬಂಧಿಸಿದ ಪ್ರಾಧಿಕಾರದವರು ಕ್ರಮಕೈಗೊಳ್ಳುವರು, ಒಂದೊಮ್ಮೆ ಇಂಧನ ಅಥವಾ ಎಲ್ ಪಿ ಜಿ ಭರಿಸಿಕೊಂಡು ಹಿಂತಿರುಗುವಾಗ ದಂಡ ವಿಧಿಸಿದ್ದಲ್ಲಿ ಆ ಬಗ್ಗೆ ಪಟ್ಟಿ ಒದಗಿಸುವಂತೆ ಅವರು ತಿಳಿಸಿದರು.


ಆಟೋ ರಿಕ್ಷಾ ದರ ಪರಿಷ್ಕರಣಿಗೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಆಟೋರಿಕ್ಷಾ ಸಂಘದವರು ಹಾಗೂ ಜಿಲ್ಲಾಡಳಿತ ನಡುವೆ ಸಹಮತ ಬರದಿರುವ ಕಾರಣ ಮುಂದಿನ ಸಭೆಯಲ್ಲಿ ದರ ಪರಿಷ್ಕರಣೆಯ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಸಂಚಾರಿ ವಿಭಾಗದ ಎಸಿಪಿ ಗೀತಾ ಕುಲಕರ್ಣಿ, ರಿಕ್ಷಾ ಚಾಲಕ-ಮಾಲಕರ ಒಕ್ಕೂಟದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಅಬುಬಕರ್ ಸುರತ್ಕಲ್, ಗೌರವಾಧ್ಯಕ್ಷ ವಿಷ್ಣುಮೂರ್ತಿ, ಕಾರ್ಯದರ್ಶಿ ಭರತ್ ಕುಮಾರ್, ಸಲಹೆಗಾರರಾದ ಮೊಹಮ್ಮದ್ ಇರ್ಫಾನ್, ಅರುಣ್ ಕುಮಾರ್ ಸೇರಿದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು