11:29 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸುವ ಶಿವದಾಸನ್ !: ಇದು ಯಾಕೆ ಗೊತ್ತೇ? ಮುಂದಕ್ಕೆ ಓದಿ…

01/07/2021, 07:27

ಮಲಪುರಂ(reporterkarnataka news):  ಕೆಲವರು ಪ್ರಚಾರಕ್ಕಾಗಿ ಸಮಾಜ ಸೇವೆ ಮಾಡಿದರೆ, ಇನ್ನೂ ಕೆಲವರ ರಕ್ತದಲ್ಲೇ ಸಮಾಜ ಸೇವೆ ಗುಣ ಬಂದಿರುತ್ತದೆ. ಇವರಿಗೆ ಯಾವುದೇ ಪ್ರಚಾರ ಬೇಕಾಗಿಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಲೇ ಇರುತ್ತಾರೆ. ಅಂಥವರಲ್ಲೊಬ್ಬರು ಕೆ.ಬಿ. ಶಿವದಾಸನ್.!


ಕೇರಳದ ಮಲ್ಲಪುರ ಜಿಲ್ಲೆಯ ಚಂಗರಾಮ್ ಕುಲಂ ಪಟ್ಟಣದ ಮುಕ್ಕುತ್ತಲದವರು ಈ ಶಿವದಾಸನ್. ಬಡ, ದೀನ ದಲಿತರಿಗಾಗಿ ಇವರು ಪ್ರತಿದಿನ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಂಘಟನೆಯ, ಸಂಘ – ಸಂಸ್ಥೆಗಳ ಬೆಂಬಲವಿಲ್ಲದ ವೈಯಕ್ತಿಕ ನೆಲೆಯಲ್ಲಿ ತಾನೇ ಕೈಯಿಂದ ಹಣ ಹಾಕಿ ಸಮಾಜ ಸೇವೆ ಮಾಡುತ್ತಾರೆ. ಲಾಕ್ ಡೌನ್ ಸಮಯದಲ್ಲಿ ಆಹಾರ ಕಿಟ್ ವಿತರಿಸಿದ್ದಾರೆ. ಇದೀಗ ಲಾಕ್ ಡೌನ್ ತೆರವಾಗುತ್ತಿದ್ದಂತೆ ಜನರು ಬಳಸಿ ಎಲ್ಲೆಂದರಲ್ಲಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ಅದನ್ನು ನಾಶ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ.


ಶಿವದಾಸನ್ ಅವರು ಮೊದಲಿಗೆ ಈ ಕೆಲಸವನ್ನು ತನ್ನ ಮನೆ ಸುತ್ತಮುತ್ತಲಿನ ಪ್ರದೇಶದಿಂದಲೇ ಆರಂಭಿಸಿದ್ದಾರೆ. ಪೊನ್ನಾಣಿ ತಾಲೂಕಿನ ನನ್ನಮುಕ್ಕು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮುಕ್ಕುತ್ತಲ ಪ್ರದೇಶದಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ಅದನ್ನು ಜನವಸತಿ ಇಲ್ಲದ ಪ್ರದೇಶಕ್ಕೆ ಕೊಂಡೋಗಿ ಬೆಂಕಿ ಹಚ್ಚಿ ನಾಶ ಮಾಡುವ ಕೆಲಸ ಮಾಡುತ್ತಿದ್ದಾರೆ.

ಎಲ್ಲೆಂದರಲ್ಲಿ ಎಸೆದ ಮಾಸ್ಕ್ ಗಳನ್ನು ನಾಯಿ, ಬೆಕ್ಕುಗಳು ಮೂಸಿ ಅದರ ಮೂಲಕ ಕೊರೊನಾ ಹರಡುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ನಾಶ ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಶಿವದಾಸನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು