5:01 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭವಾಗಲಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ

30/10/2022, 00:03

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭ ಆಗಬೇಕು. ಸಮಾಜದಲ್ಲಿ ಆಗುವ ತಪ್ಪುಗಳ ಬಗ್ಗೆ ಧ್ವನಿ ಎತ್ತುವ ಮನೋಭಾವವನ್ನು ಯುವಜನರು ಹೊಂದಿರಬೇಕು. ಪ್ರಾಥಮಿಕ ಹಂತದಿಂದಲೇ ಇಂತಹ ವಿಚಾರಗಳನ್ನು ಕಲಿಸುವ ಮತ್ತು ಅರಿಯುವ ಪ್ರಕ್ರಿಯೆ ಆದಾಗ ಎಲ್ಲರೂ ಸಮಾನರೆಂಬ ಮನೋಭಾವ ಹುಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಅಭಿಪ್ರಾಯಪಟ್ಟರು.

ಅವರು ಶನಿವಾರ ನಗರದ ರೋಶನಿ ನಿಲಯ ಸಭಾಂಗಣದಲ್ಲಿ ಯುವಜನ ಮುನ್ನಡೆ- ಸಂವಾದ ಯುವಜನ ಸಂಪನ್ಮೂಲ ಕೇಂದ್ರದಿಂದ ಆಯೋಜಿಸಲಾದ ಯುವಜನ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಲ್ಲರೂ ಸಮಾನರೆಂಬ ಮನಸ್ಥಿತಿ ನಾವು ಬೆಳೆಸಿಕೊಂಡಾಗ ದೇಶಾಭಿಮಾನ ಬೆಳೆಸಿ ಕೊಳ್ಳಲು ಸಾಧ್ಯ ಎಂದು ಕರ್ತವ್ಯ ಪಾಲನೆಗಾಗಿ ಯುವಜನರ ಅಭಿವ್ಯಕ್ತಿ ಎಂಬ ವಿಚಾರದಲ್ಲಿ ಮಾತನಾಡಿದ ಅವರು ನುಡಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ತಾರನಾಥ ಗಟ್ಟಿ ಮಾತನಾಡಿ, ಕರಾವಳಿಯಲ್ಲಿ ನಾವು ಹಿಂದೆ ಕಾಣುತ್ತಿದ್ದ ಭಾತೃತ್ವ, ಸೌಹಾರ್ದತೆ ದೂರವಾಗಿದೆ. ಊರು ಮಾತ್ರವಲ್ಲದೆ, ಕಾಲೇಜು ಕ್ಯಾಂಪಸ್‌ನಲ್ಲಿಯೂ ಮನಸ್ಸುಗಳ ನಡುವೆ ಕಂದಕವೇರ್ಪಟ್ಟಿದೆ. ಈ ಬಗ್ಗೆ ಯುವಜನತೆ ಅರಿತುಕೊಂಡು ತಮ್ಮ ಕರ್ತವ್ಯ ಪಾಲನೆಯನ್ನು ನಿರ್ವಹಿಸಬೇಕಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು