3:59 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತೆಲಂಗಾಣದಿಂದ ಪ್ರವಾಸ ಬಂದಿದ್ದ ವ್ಯಕ್ತಿ ಬ್ರಹ್ಮಾವರ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಸಾವು

30/10/2022, 11:56

ಬ್ರಹ್ಮಾವರ(reporterkarnataka.com): ಲಾಡ್ಜ್ ನಲ್ಲಿ‌ ತಂಗಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬ್ರಹ್ಮಾವರ ಮದರ್‌ ಪ್ಯಾಲೇಸ್‌ ನಲ್ಲಿ ಇಂದು ಮುಂಜಾನೆ 3ಗಂಟೆಗೆ ನಡೆದಿದೆ.

ತೆಲಂಗಾಣ ರಾಜ್ಯದ ಸಿದ್ದಿಪೇಟ ಜಿಲ್ಲೆಯ‌ ಸಿದ್ದಿಪೇಟ ನಿವಾಸಿ ವಿ. ಶ್ರೀನಿವಾಸ(61) ಮೃತದುರ್ದೈವಿ. ಇವರು ಅ.26ರಂದು ಮಗ ಮೋಹನ ಕುಮಾರ್, ಪತ್ನಿ, ಮಗನ ಹೆಂಡತಿ, ಮಗುವಿನೊಂದಿಗೆ ಉಡುಪಿ ಜಿಲ್ಲೆ ಪ್ರವಾಸಕ್ಕೆ ಬಂದಿದ್ದರು. ಅ. 27ರಂದು ಕೊಲ್ಲೂರು ದೇವರ ದರ್ಶನ ಮುಗಿಸಿಕೊಂಡು, ವಿಶ್ರಾಂತಿ ಪಡೆಯಲು ಬ್ರಹ್ಮಾವರ ಮದರ್‌ ಪ್ಯಾಲೇಸ್‌ ಗೆ ಬಂದು ತಂಗಿದ್ದರು. ಇಂದು ಬೆಳಗ್ಗಿನ ಜಾವ 3:10ಕ್ಕೆ ವಿ.ಶ್ರೀನಿವಾಸ ಅವರಿಗೆ ಜ್ವರ ಹಾಗೂ ಉಸಿರಾಟದ ತೊಂದರೆವುಂಟಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಮಹೇಶ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈಧ್ಯರು ಶ್ರೀನಿವಾಸ ರವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ಧಾರೆ.

ಶ್ರೀನಿವಾಸ್ ಅವರು ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದು, ಅದೇ ಕಾರಣದಿಂದ ಅಥವಾ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು