4:49 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ತೆಲಂಗಾಣದಿಂದ ಪ್ರವಾಸ ಬಂದಿದ್ದ ವ್ಯಕ್ತಿ ಬ್ರಹ್ಮಾವರ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಸಾವು

30/10/2022, 11:56

ಬ್ರಹ್ಮಾವರ(reporterkarnataka.com): ಲಾಡ್ಜ್ ನಲ್ಲಿ‌ ತಂಗಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬ್ರಹ್ಮಾವರ ಮದರ್‌ ಪ್ಯಾಲೇಸ್‌ ನಲ್ಲಿ ಇಂದು ಮುಂಜಾನೆ 3ಗಂಟೆಗೆ ನಡೆದಿದೆ.

ತೆಲಂಗಾಣ ರಾಜ್ಯದ ಸಿದ್ದಿಪೇಟ ಜಿಲ್ಲೆಯ‌ ಸಿದ್ದಿಪೇಟ ನಿವಾಸಿ ವಿ. ಶ್ರೀನಿವಾಸ(61) ಮೃತದುರ್ದೈವಿ. ಇವರು ಅ.26ರಂದು ಮಗ ಮೋಹನ ಕುಮಾರ್, ಪತ್ನಿ, ಮಗನ ಹೆಂಡತಿ, ಮಗುವಿನೊಂದಿಗೆ ಉಡುಪಿ ಜಿಲ್ಲೆ ಪ್ರವಾಸಕ್ಕೆ ಬಂದಿದ್ದರು. ಅ. 27ರಂದು ಕೊಲ್ಲೂರು ದೇವರ ದರ್ಶನ ಮುಗಿಸಿಕೊಂಡು, ವಿಶ್ರಾಂತಿ ಪಡೆಯಲು ಬ್ರಹ್ಮಾವರ ಮದರ್‌ ಪ್ಯಾಲೇಸ್‌ ಗೆ ಬಂದು ತಂಗಿದ್ದರು. ಇಂದು ಬೆಳಗ್ಗಿನ ಜಾವ 3:10ಕ್ಕೆ ವಿ.ಶ್ರೀನಿವಾಸ ಅವರಿಗೆ ಜ್ವರ ಹಾಗೂ ಉಸಿರಾಟದ ತೊಂದರೆವುಂಟಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಮಹೇಶ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈಧ್ಯರು ಶ್ರೀನಿವಾಸ ರವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ಧಾರೆ.

ಶ್ರೀನಿವಾಸ್ ಅವರು ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದು, ಅದೇ ಕಾರಣದಿಂದ ಅಥವಾ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು