4:36 PM Monday3 - November 2025
ಬ್ರೇಕಿಂಗ್ ನ್ಯೂಸ್
Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ

ಇತ್ತೀಚಿನ ಸುದ್ದಿ

ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನು ಸಮರ

31/10/2022, 23:07

ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಶಾಸಕ ಕಾಮತ್ ತಕ್ಷಣವೇ ಪ್ರಕರಣ ದಾಖಲಿಸುವಂತೆ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ತುಳುವರ ನಂಬಿಕೆಗಳನ್ನು ಅಪಹಾಸ್ಯ ಮಾಡುವುದು, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಬರೆಯುವುದು ಗಮನಕ್ಕೆ ಬಂದಿದೆ. ಈಗಾಗಲೇ ಈ ಕುರಿತು ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರಗಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಳಿಕ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರನ್ನು ಭೇಟಿಯಾಗಿರುವ ಯುವ ವೇದಿಕೆಯ ಪ್ರಮುಖರು ಸೂಕ್ತ ಕ್ರಮ ಕೈಗೊಳ್ಳುವಂತೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಈಗಾಗಲೇ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ದಯಾನಂದ ಜಿ ಕತ್ತಲ್ಸರ್. ತುಳುನಾಡ ದೈವರಾದನೆ ಯುವ ವೇದಿಕೆ (ರಿ) ಸಂಚಾಲಕರಾದ ಭರತ್ ಬಲ್ಲಾಲ್ ಬಾಗ್, ರೋಶನ್ ರೆನೋಲ್ಡ್ , ಸಂತೋಷ್ ಕುಮಾರ್, ತುಲು ರಾಜ್ಯ ಬಾಷೆ ಸಮಿತಿಯ ಚರಿತ್ ಪೂಜಾರಿ, ಮುಂಡಲ ಯುವ ವೇದಿಕೆ ಅಧ್ಯಕ್ಷ ಜಯಚಂದ್ರ‌ ಕೊಟ್ಟರ ಕ್ರಾಸ್, ಸಂಘಟನಾ ಕಾರ್ಯದರ್ಶಿ ರವಿ ಕುದುಮುಲ್ ಗಾರ್ಡನ್, ನಂದೀಶ್, ಪ್ರಕ್ಯತ್, ನಂದನ್ ಯುವರಾಜ್, ಅಭಿಷ್ ಪ್ರಿತೇಶ್, ಧನುಷ್, ಫ್ರಾನ್ಸಿಸ್ ಡಿಸೋಜಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು