5:50 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿ ಮಂಗಳೂರು: ತ್ಯಾಜ್ಯ ವಿಲೇವಾರಿಯಲ್ಲೂ ಆಗಲಿ ವೆರಿ ಸ್ಮಾರ್ಟ್

31/10/2022, 23:19

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕಾಮಗಾರಿಯ ರೆಸಿಗೆ ನಿಂತಿರುವ ಮಂಗಳೂರು ನಗರದ ಅಲ್ಲಲ್ಲಿ ಕಸದ ರಾಶಿಗಳು ಕಂಡು ಬರುತ್ತಿದ್ದು, ಕಡಲ ನಗರಿಗೆ ಇದು ಕಪ್ಪುಚುಕ್ಕೆ ಯಾಗಿ ಪರಿಣಮಿಸಿದೆ. ಸಾರ್ವಜನಿಕರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಮಕೃಷ್ಣ ಮಿಷನ್ ನವರು ಸ್ವಚ್ಚ ಮಂಗಳೂರು ಮಾಡಿದರೆ” , ಕಾರ್ಪೋರೇಶನ್ ನವರು ಅಸ್ವಚ್ಛ ಮಂಗಳೂರು ಅಂತಾರೆ ಎಂದು ಜನರು ಆಡಿಕೊಳ್ಳುತ್ತಾರೆ.

ಮಂಗಳೂರು ದಿನದಿಂದ ದಿನಕ್ಕೆ ಸ್ಮಾರ್ಟ್ ಆಗುತ್ತಿದೆ. ಆದರೆ ಕಸದ ಸಮಸ್ಯೆಗೆ ಮಾತ್ರ ಮುಕ್ತಿ ಇಲ್ಲ. ನಗರದ ವಿವಿ ಕಾಲೇಜಿನ ಆವರಣ ದ ಹೊರಗಿರುವ ಫುಟ್ ಭಾತ್ ನಲ್ಲಿ ಇತ್ತೀಚಿಗೆ ಕಸದ ರಾಶಿಯು ತುಂಬಿಕೊಂಡಿದ್ದು ಪಾದಚಾರಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ವರ್ಷದ ಹಿಂದೆ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ನಗರದಾದ್ಯಂತ ಕಸ ಶುಚಿಗೊಳಿಸುವ ಕಾರ್ಯ ನಡೆದಿತ್ತು. ಇದೇ ವೇಳೆ ಆವರಣ ಗೋಡೆಗಳನ್ನು ವಿದ್ಯಾರ್ಥಿಗಳು ಹಾಗೂ ಸಂಘ ಸಂಸ್ಥೆ ಗಳು ಶುಚಿ ಗೊಳಿಸಿ,ಬಣ್ಣ ಬಳಿದು ನಗರಕ್ಕೆ ಮೆರುಗು ತಂದಿದ್ದರು. ಇದೀಗ ಅದೇ ಸ್ಥಳದಲ್ಲಿ ಮತ್ತೆ ಬಿದ್ದಿರುವ ಕಸವನ್ನು ಪಾಲಿಕೆಯು ಶುಚಿಗೊಳಿಸದೆ ತನ್ನ ಆಲಾಸ್ಯ ತನವನ್ನು ತೋರಿಸಿದೆ.

ಕಸ ನಿರ್ವಹಣೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವ ಪಾಲಿಕೆಗೆ ನಗರವನ್ನು ಅಂದ ಗೊಳಿಸಲು ಸಾಧ್ಯವಾಗಿಲ್ಲ. ಆದರೆ ಸಂಘ ಸಂಸ್ಥೆಗಳು ಶುಚಿಗೊಳಿಸಿ ಕೊಟ್ಟಿದ್ದನ್ನು ನಿರ್ವಹಿಸಲಾಗದೆ ಕುಂಭ ಕರ್ಣನಂತೆ ಗೊರಕೆಗೆ ಜಾರಿದ್ದು, ತಿಂಗಳ ಹಿಂದೆ ಗಾಂಧೀ ಜಯಂತಿಯಂದು ಪೊರಕೆ ಹಿಡಿದು ಫೋಟೋಗೆ ಪೋಸು ಕೊಟ್ಟವರು, ಚುನಾವಣೆ ಸಮೀಪಿಸುತ್ತಿದಂತೆ ಒಬ್ಬರ ಮೇಲೆ ಮತ್ತೊಬ್ಬರು ಕೆಸರೆರಚುವ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು