3:02 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿ ಮಂಗಳೂರು: ತ್ಯಾಜ್ಯ ವಿಲೇವಾರಿಯಲ್ಲೂ ಆಗಲಿ ವೆರಿ ಸ್ಮಾರ್ಟ್

31/10/2022, 23:19

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕಾಮಗಾರಿಯ ರೆಸಿಗೆ ನಿಂತಿರುವ ಮಂಗಳೂರು ನಗರದ ಅಲ್ಲಲ್ಲಿ ಕಸದ ರಾಶಿಗಳು ಕಂಡು ಬರುತ್ತಿದ್ದು, ಕಡಲ ನಗರಿಗೆ ಇದು ಕಪ್ಪುಚುಕ್ಕೆ ಯಾಗಿ ಪರಿಣಮಿಸಿದೆ. ಸಾರ್ವಜನಿಕರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಮಕೃಷ್ಣ ಮಿಷನ್ ನವರು ಸ್ವಚ್ಚ ಮಂಗಳೂರು ಮಾಡಿದರೆ” , ಕಾರ್ಪೋರೇಶನ್ ನವರು ಅಸ್ವಚ್ಛ ಮಂಗಳೂರು ಅಂತಾರೆ ಎಂದು ಜನರು ಆಡಿಕೊಳ್ಳುತ್ತಾರೆ.

ಮಂಗಳೂರು ದಿನದಿಂದ ದಿನಕ್ಕೆ ಸ್ಮಾರ್ಟ್ ಆಗುತ್ತಿದೆ. ಆದರೆ ಕಸದ ಸಮಸ್ಯೆಗೆ ಮಾತ್ರ ಮುಕ್ತಿ ಇಲ್ಲ. ನಗರದ ವಿವಿ ಕಾಲೇಜಿನ ಆವರಣ ದ ಹೊರಗಿರುವ ಫುಟ್ ಭಾತ್ ನಲ್ಲಿ ಇತ್ತೀಚಿಗೆ ಕಸದ ರಾಶಿಯು ತುಂಬಿಕೊಂಡಿದ್ದು ಪಾದಚಾರಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ವರ್ಷದ ಹಿಂದೆ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ನಗರದಾದ್ಯಂತ ಕಸ ಶುಚಿಗೊಳಿಸುವ ಕಾರ್ಯ ನಡೆದಿತ್ತು. ಇದೇ ವೇಳೆ ಆವರಣ ಗೋಡೆಗಳನ್ನು ವಿದ್ಯಾರ್ಥಿಗಳು ಹಾಗೂ ಸಂಘ ಸಂಸ್ಥೆ ಗಳು ಶುಚಿ ಗೊಳಿಸಿ,ಬಣ್ಣ ಬಳಿದು ನಗರಕ್ಕೆ ಮೆರುಗು ತಂದಿದ್ದರು. ಇದೀಗ ಅದೇ ಸ್ಥಳದಲ್ಲಿ ಮತ್ತೆ ಬಿದ್ದಿರುವ ಕಸವನ್ನು ಪಾಲಿಕೆಯು ಶುಚಿಗೊಳಿಸದೆ ತನ್ನ ಆಲಾಸ್ಯ ತನವನ್ನು ತೋರಿಸಿದೆ.

ಕಸ ನಿರ್ವಹಣೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವ ಪಾಲಿಕೆಗೆ ನಗರವನ್ನು ಅಂದ ಗೊಳಿಸಲು ಸಾಧ್ಯವಾಗಿಲ್ಲ. ಆದರೆ ಸಂಘ ಸಂಸ್ಥೆಗಳು ಶುಚಿಗೊಳಿಸಿ ಕೊಟ್ಟಿದ್ದನ್ನು ನಿರ್ವಹಿಸಲಾಗದೆ ಕುಂಭ ಕರ್ಣನಂತೆ ಗೊರಕೆಗೆ ಜಾರಿದ್ದು, ತಿಂಗಳ ಹಿಂದೆ ಗಾಂಧೀ ಜಯಂತಿಯಂದು ಪೊರಕೆ ಹಿಡಿದು ಫೋಟೋಗೆ ಪೋಸು ಕೊಟ್ಟವರು, ಚುನಾವಣೆ ಸಮೀಪಿಸುತ್ತಿದಂತೆ ಒಬ್ಬರ ಮೇಲೆ ಮತ್ತೊಬ್ಬರು ಕೆಸರೆರಚುವ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು