6:31 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕಾವೂರು: ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮ; ಹಕ್ಕು ಪತ್ರ,ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ

31/10/2022, 23:40

ಸುರತ್ಕಲ್(reporterkarnataka.com): ನಾಗರಿಕರಿಗೆ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ನಗರದ ಕಾವೂರಿನಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ನೀಡಿದರು. ಹಕ್ಕುಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಿಸಲಾಯಿತು. ಸುಮಾರು 3000 ಮಂದಿ ನಾಗರಿಕರು ಭಾಗವಹಿಸಿದ್ದು, 30 ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಸರಕಾರದ ಯೋಜನೆ, ಸೌಲಭ್ಯಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಹಿಡಿದು ಕಾರ್ಮಿಕ ಇಲಾಖೆಯನ್ನು ಸೇರಿಸಿ ಕಂದಾಯ ಇಲಾಖೆಯ ತನಕ ವಿವಿಧ ಇಲಾಖೆಗಳು ಒಂದೇ ಸೂರಿನಲ್ಲಿ ಪರಿಹಾರ ನೀಡುವಂತೆ ಮಾಡಲಾಗಿದೆ. ಹಕ್ಕುಪತ್ರ, ಮಾಸಾಶನ, ಪಿಂಚಣಿ, ವಿಕಲಚೇತನ ಸವಲತ್ತು, ಕಾರ್ಮಿಕ ಕಾರ್ಡ್, ಆಯುಷ್ಮಾನ್ ಕಾರ್ಡ್, ಆಧಾರ ಕಾರ್ಡ್ ಸಹಿತ ಎಲ್ಲವೂ ಇಲ್ಲಿ ಶೀಘ್ರದಲ್ಲಿ ಮಾಡಿಕೊಡಲಾಗುತ್ತದೆ. ಯಾವುದೇ ಕಾರಣಕ್ಕೆ ಒಂದು ದಿನದಲ್ಲಿ ಪರಿಹಾರ ಆಗದ ಸಮಸ್ಯೆ ಇದ್ದರೆ ಇಲಾಖೆ ಅಧಿಕಾರಿಗಳೊಂದಿಗೆ ಕಾರಣ ಚರ್ಚಿಸಿ ವಾರದೊಳಗೆ ಮನೆ, ಕಚೇರಿಗೆ ಪ್ರಮಾಣಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ನುಡಿದರು.


ಕಾರ್ಯಕ್ರಮದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ತಹಶೀಲ್ದಾರ್ ನವೀನ್ ಕುಮಾರ್, ಮನಪಾ ಸದಸ್ಯರಾದ ಶರತ್ ಕುಮಾರ್, ಸುಮಂಗಳ ರಾವ್, ಕಿರಣ್ ಕುಮಾರ್ ಕೋಡಿಕಲ್, ಲೋಹಿತ್ ಅಮೀನ್, ಮನೋಜ್ ಕುಮಾರ್, ಅನಿಲ್ ಕುಮಾರ್ , ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಮಹಾಶಕ್ತಿ ಕೇಂದ್ರದ‌ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಪ್ರಮುಖರು, ವಿವಿಧ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು