7:34 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಉಸ್ತುವಾರಿ ಸಚಿವರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಕನ್ನಡ ಧ್ವಜಾರೋಹಣ

01/11/2022, 14:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ಅವರ ಗೈರು ಹಾಜರಿನಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ 67ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ದಾವಣಗೆರೆ ಹಾಗೂ ಚಿಕ್ಕಮಗಳೂರು ಎರಡು ಜಿಲ್ಲೆಗೂ ಉಸ್ತುವಾರಿ ಸಚಿವರಾಗಿರುವ ಭೈರತಿ ಬಸವರಾಜು ದಾವಣಗೆರೆ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಧ್ವಜಾರೋಹಣ ನೆರವೇರಿಸಿದರು.

ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಇದೇ ಮೊದಲ ಬಾರಿಗೆ ಶಾಲಾ-ಮಕ್ಕಳು, ಪೊಲೀಸರ ಜೊತೆ ಪಥಸಂಚಲನದಲ್ಲಿ ಕಂಸಾಳೆ, ಡೊಳ್ಳು, ಛಂಡೇ ವಾಧ್ಯ, ವೀರಗಾಸೆ, ಸ್ಥಬ್ಧಚಿತ್ರ ಸೇರಿದಂತೆ ನಾಡಿನ ಸಂಸ್ಕೃತಿಯ ಪರಂಪರೆಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರವಣಿಗೆಗೂ ಅವಕಾಶ ನೀಡಲಾಗಿತ್ತು.


ಕಾರ್ಯಕ್ರಮಕ್ಕೂ ಮುನ್ನ ಕನ್ನಡ ರಾಜ್ಯೋತ್ಸವದ ಮೆರವಣಿಗೆ ವೇಳೆ ಜಿಲ್ಲಾಡಳಿತ ಹಾಗೂ ಶಾಸಕ ಸಿ.ಟಿ.ರವಿ ವಿರುದ್ಧ ಅಸಮಾಧಾನ ಹೊರಹಾಕಿ ಕಪ್ಪು ಪಟ್ಟಿ ಪ್ರದರ್ಶಿಸಲು ಸಿದ್ಧತೆ ನಡೆಸಿದ್ದ 20ಕ್ಕೂ ಹೆಚ್ಚು ದಲಿತ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದರು. ಕಳೆದ ನಾಲ್ಕೈದು ದಿನಗಳಿಂದ ನಗರದ ಆಜಾದ್ ಪಾರ್ಕ್ ಬಳಿ, ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಸಮೀಪ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ತೋಟದ ಮಾಲೀಕನ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದವು. ತೋಟದ ಮಾಲೀಕನನ್ನ ಬಂಧಿಸದ ಕಾರಣ ಕಾರ್ಯಕರ್ತರು ಜಿಲ್ಲಾಡಳಿತದ ಮೇಲೆ ಆಕ್ರೋಶ ಹೊರಹಾಕುವ ವೇಳೆ ಎಲ್ಲರನ್ನೂ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು