7:15 AM Thursday9 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ವೈದ್ಯೋ ನಾರಾಯಣೋ ಹರಿಃ: ಇದಕ್ಕೆ ತಕ್ಕ ಹೆಸರು ಮಂಗಳಾ ಆಸ್ಪತ್ರೆಯ ಸಂಸ್ಥಾಪಕ ಡಾ. ಗಣಪತಿ

01/07/2021, 11:57

ಏಪ್ರಿಲ್ 28, 2021ರ ಬುಧವಾರ ರಾತ್ರಿ 11ರ ಸಮಯ. ಸುಮಾರು ದಿನಗಳಿಂದ ಜ್ವರ ಮೈಕೈನೋವು ಎಂದು ಚಡಪಡಿಸುತ್ತಿದ್ದ ನನ್ನ ಪತ್ನಿ ಹಾಗೂ ಮಗ ಇಬ್ಬರಿಗೂ ಅಂದು ತಡೆಯಲಾರದ ವೇದನೆ. ಇದು ಕೋವಿಡ್ ಎಂದು ಆಗಲೇ ತಿಳಿದಿದ್ದ ನಮಗೆ ಗಾಬರಿ. ಮನೆಯಲ್ಲಿ ಚಿಕ್ಕಮಕ್ಕಳು.  ಸಣ್ಣ ಊರುಗಳಲ್ಲಿ ಸರಿಯಾದ ವ್ಯವಸ್ಥೆ ಇರದ ಕಾರಣ, ದೂರದ ಮಂಗಳೂರು/ ಮಣಿಪಾಲವೇ ಗತಿ. ಆಗ ನಮಗೆ ಸಹಾಯಕ್ಕೆ ಬಂದವರು ಮಂಗಳೂರಿನ ಪ್ರಸಿದ್ಧ, ಮಂಗಳ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್ ನ ಸಂಸ್ಥಾಪಕರಾದ ಡಾ। ಗಣಪತಿ. ವಿಷಯ ತಿಳಿದ ಕೂಡಲೇ ತಮ್ಮ ಸಂಸ್ಥೆಯ ಅಂಬುಲೆನ್ಸ್ ಅನ್ನು ಕಾರ್ಕಳದಲ್ಲಿರುವ ನಮ್ಮ ಮನೆಗೆ ಕಳುಹಿಸಿ ಆಸ್ಪತ್ರೆಗೆ ದಾಖಲಿಸಿ ನುರಿತ ವೈದ್ಯರ ತಂಡದ ಸಹಾಯದೊಂದಿಗೆ ಸೂಕ್ತ ಚಿಕಿತ್ಸೆಯನ್ನು ಕೊಟ್ಟರು. ತೀವ್ರ ನಿಗಾ ವಹಿಸಿದ ಪರಿಣಾಮ, ಕೇವಲ ಎರಡೇ ದಿನಗಳಲ್ಲಿ ಸೋಂಕು ಕಡಿಮೆಯಾಯಿತು. ನನ್ನಂತಹ  ಸಾವಿರಾರು ಫಲಾನುಭವಿಗಳ ಭಾವನೆಗಳ ಸಂಕೇತವಾಗಿರುವ ಈ ನಮನಗಳು ಡಾ. ಗಣಪತಿ ಹಾಗೂ ಅವರ ಎಲ್ಲ ಸಿಬ್ಬಂದಿ ವರ್ಗಕ್ಕೆ  ಹಾಗೂ ಸಮಸ್ತ ವೈದ್ಯ ಲೋಕಕ್ಕೆ ಸಮರ್ಪಿತ. 

ವೈದ್ಯೋ ನಾರಾಯಣೋ ಹರಿಃ 

ಇತ್ತೀಚಿನ ಸುದ್ದಿ

ಜಾಹೀರಾತು