7:30 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ವೈದ್ಯೋ ನಾರಾಯಣೋ ಹರಿಃ: ಇದಕ್ಕೆ ತಕ್ಕ ಹೆಸರು ಮಂಗಳಾ ಆಸ್ಪತ್ರೆಯ ಸಂಸ್ಥಾಪಕ ಡಾ. ಗಣಪತಿ

01/07/2021, 11:57

ಏಪ್ರಿಲ್ 28, 2021ರ ಬುಧವಾರ ರಾತ್ರಿ 11ರ ಸಮಯ. ಸುಮಾರು ದಿನಗಳಿಂದ ಜ್ವರ ಮೈಕೈನೋವು ಎಂದು ಚಡಪಡಿಸುತ್ತಿದ್ದ ನನ್ನ ಪತ್ನಿ ಹಾಗೂ ಮಗ ಇಬ್ಬರಿಗೂ ಅಂದು ತಡೆಯಲಾರದ ವೇದನೆ. ಇದು ಕೋವಿಡ್ ಎಂದು ಆಗಲೇ ತಿಳಿದಿದ್ದ ನಮಗೆ ಗಾಬರಿ. ಮನೆಯಲ್ಲಿ ಚಿಕ್ಕಮಕ್ಕಳು.  ಸಣ್ಣ ಊರುಗಳಲ್ಲಿ ಸರಿಯಾದ ವ್ಯವಸ್ಥೆ ಇರದ ಕಾರಣ, ದೂರದ ಮಂಗಳೂರು/ ಮಣಿಪಾಲವೇ ಗತಿ. ಆಗ ನಮಗೆ ಸಹಾಯಕ್ಕೆ ಬಂದವರು ಮಂಗಳೂರಿನ ಪ್ರಸಿದ್ಧ, ಮಂಗಳ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್ ನ ಸಂಸ್ಥಾಪಕರಾದ ಡಾ। ಗಣಪತಿ. ವಿಷಯ ತಿಳಿದ ಕೂಡಲೇ ತಮ್ಮ ಸಂಸ್ಥೆಯ ಅಂಬುಲೆನ್ಸ್ ಅನ್ನು ಕಾರ್ಕಳದಲ್ಲಿರುವ ನಮ್ಮ ಮನೆಗೆ ಕಳುಹಿಸಿ ಆಸ್ಪತ್ರೆಗೆ ದಾಖಲಿಸಿ ನುರಿತ ವೈದ್ಯರ ತಂಡದ ಸಹಾಯದೊಂದಿಗೆ ಸೂಕ್ತ ಚಿಕಿತ್ಸೆಯನ್ನು ಕೊಟ್ಟರು. ತೀವ್ರ ನಿಗಾ ವಹಿಸಿದ ಪರಿಣಾಮ, ಕೇವಲ ಎರಡೇ ದಿನಗಳಲ್ಲಿ ಸೋಂಕು ಕಡಿಮೆಯಾಯಿತು. ನನ್ನಂತಹ  ಸಾವಿರಾರು ಫಲಾನುಭವಿಗಳ ಭಾವನೆಗಳ ಸಂಕೇತವಾಗಿರುವ ಈ ನಮನಗಳು ಡಾ. ಗಣಪತಿ ಹಾಗೂ ಅವರ ಎಲ್ಲ ಸಿಬ್ಬಂದಿ ವರ್ಗಕ್ಕೆ  ಹಾಗೂ ಸಮಸ್ತ ವೈದ್ಯ ಲೋಕಕ್ಕೆ ಸಮರ್ಪಿತ. 

ವೈದ್ಯೋ ನಾರಾಯಣೋ ಹರಿಃ 

ಇತ್ತೀಚಿನ ಸುದ್ದಿ

ಜಾಹೀರಾತು