4:52 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ವೈದ್ಯೋ ನಾರಾಯಣೋ ಹರಿಃ: ಇದಕ್ಕೆ ತಕ್ಕ ಹೆಸರು ಮಂಗಳಾ ಆಸ್ಪತ್ರೆಯ ಸಂಸ್ಥಾಪಕ ಡಾ. ಗಣಪತಿ

01/07/2021, 11:57

ಏಪ್ರಿಲ್ 28, 2021ರ ಬುಧವಾರ ರಾತ್ರಿ 11ರ ಸಮಯ. ಸುಮಾರು ದಿನಗಳಿಂದ ಜ್ವರ ಮೈಕೈನೋವು ಎಂದು ಚಡಪಡಿಸುತ್ತಿದ್ದ ನನ್ನ ಪತ್ನಿ ಹಾಗೂ ಮಗ ಇಬ್ಬರಿಗೂ ಅಂದು ತಡೆಯಲಾರದ ವೇದನೆ. ಇದು ಕೋವಿಡ್ ಎಂದು ಆಗಲೇ ತಿಳಿದಿದ್ದ ನಮಗೆ ಗಾಬರಿ. ಮನೆಯಲ್ಲಿ ಚಿಕ್ಕಮಕ್ಕಳು.  ಸಣ್ಣ ಊರುಗಳಲ್ಲಿ ಸರಿಯಾದ ವ್ಯವಸ್ಥೆ ಇರದ ಕಾರಣ, ದೂರದ ಮಂಗಳೂರು/ ಮಣಿಪಾಲವೇ ಗತಿ. ಆಗ ನಮಗೆ ಸಹಾಯಕ್ಕೆ ಬಂದವರು ಮಂಗಳೂರಿನ ಪ್ರಸಿದ್ಧ, ಮಂಗಳ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್ ನ ಸಂಸ್ಥಾಪಕರಾದ ಡಾ। ಗಣಪತಿ. ವಿಷಯ ತಿಳಿದ ಕೂಡಲೇ ತಮ್ಮ ಸಂಸ್ಥೆಯ ಅಂಬುಲೆನ್ಸ್ ಅನ್ನು ಕಾರ್ಕಳದಲ್ಲಿರುವ ನಮ್ಮ ಮನೆಗೆ ಕಳುಹಿಸಿ ಆಸ್ಪತ್ರೆಗೆ ದಾಖಲಿಸಿ ನುರಿತ ವೈದ್ಯರ ತಂಡದ ಸಹಾಯದೊಂದಿಗೆ ಸೂಕ್ತ ಚಿಕಿತ್ಸೆಯನ್ನು ಕೊಟ್ಟರು. ತೀವ್ರ ನಿಗಾ ವಹಿಸಿದ ಪರಿಣಾಮ, ಕೇವಲ ಎರಡೇ ದಿನಗಳಲ್ಲಿ ಸೋಂಕು ಕಡಿಮೆಯಾಯಿತು. ನನ್ನಂತಹ  ಸಾವಿರಾರು ಫಲಾನುಭವಿಗಳ ಭಾವನೆಗಳ ಸಂಕೇತವಾಗಿರುವ ಈ ನಮನಗಳು ಡಾ. ಗಣಪತಿ ಹಾಗೂ ಅವರ ಎಲ್ಲ ಸಿಬ್ಬಂದಿ ವರ್ಗಕ್ಕೆ  ಹಾಗೂ ಸಮಸ್ತ ವೈದ್ಯ ಲೋಕಕ್ಕೆ ಸಮರ್ಪಿತ. 

ವೈದ್ಯೋ ನಾರಾಯಣೋ ಹರಿಃ 

ಇತ್ತೀಚಿನ ಸುದ್ದಿ

ಜಾಹೀರಾತು