1:59 AM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ

02/11/2022, 12:32

ಬಂಟ್ವಾಳ(reporterkarnataka.com): ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಜರುಗಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸೀಮಾ ಮರಿಯ ಡಿಸೋಜ ಅವರು ವಹಿಸಿದ್ದರು.
ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮಿ ಅವರು ಕನ್ನಡದ ಶಾಲು ಮತ್ತು ಗುಲಾಬಿ ನೀಡುವ ಮೂಲಕ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು.
ಶಾಲಾ ವಿದ್ಯಾರ್ಥಿಗಳಾದ ಅಮೀನತ್ ಅಫೀಜಾ ಮತ್ತು ಯಶಸ್ ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು.


ಹಿಂದಿ ಭಾಷಾ ಶಿಕ್ಷಕಿ ಪುಷ್ಪ ಅವರು ಕರ್ನಾಟಕ ಏಕೀಕರಣ ಹೋರಾಟ ,ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆ ತಿಳಿಸಿದರು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವವಾದದ್ದು ಎಂಬ ಕಿವಿ ಮಾತನ್ನು ತಿಳಿಸಿದರು.
ಕನ್ನಡ ನಾಡುನುಡಿಯನ್ನು ವರ್ಣಿಸುವ ಹಾಡುಗಳನ್ನು ಹಾಡಲಾಯಿತು. ಶಾಲಾ ವಿದ್ಯಾರ್ಥಿನಿಯರು ಕನ್ನಡ ನಾಡನ್ನು ವರ್ಣಿಸುವ ನೃತ್ಯವನ್ನು ಮಾಡಿ ಮನರಂಜಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶಾಲಾ ಶಿಕ್ಷಕರಾದ ಪ್ರಭಾಕರ್, ಸಂತೋಷ್ ಕೆ ಪಮ್ಮಾರ್ ,ಮಾಲಿನಿ ,ವಿನೀತ ಉಪಸ್ಥಿತರಿದ್ದರು.
ಜೈನಬ ಹಪ್ನ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಮೇಘ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು