3:16 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ದುರಂತ ನಡೆದು 4 ದಿನಗಳ ಬಳಿಕ ಶಾಸಕರ ಭೇಟಿ !: ನಾಲ್ವರು ಸಹೋದರರ ಚಿತೆಯ ಬೆಂಕಿ ಆರಿದ ಬಳಿಕ ಆಗಮಿಸಿದ ಕುಮಟಳ್ಳಿ!!

01/07/2021, 15:24

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಒಂದೇ ಕುಟುಂಬದ ನಾಲ್ವರು ಸಹೋದರರ ಅಂತ್ಯಸಂಸ್ಕಾರ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಇಲ್ಲಿನ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.


ದುರ್ಘಟನೆ ನಡೆದು ಸುಮಾರು 4 ದಿನಗಳ ಬಳಿಕ ಶಾಸಕರು ಭೇಟಿ ನೀಡಿರುವ ಕುರಿತು ಗ್ರಾಮಸ್ಥರು ‘ರಿಪೋರ್ಟರ್ ಕರ್ನಾಟಕ’ ಜತೆ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಸಂದರ್ಭದಲ್ಲಿ ಟೈಮ್ ಮಾಡಿಕೊಂಡು ಬಂದು ಮತ ಕೇಳುವ ಶಾಸಕರಿಗೆ ಗೆದ್ದ ಬಳಿಕ ಅವರ ಕ್ಷೇತ್ರದಲ್ಲಿ ಬಲು ದೊಡ್ಡ ದುರ್ಘಟನೆಯೇ ನಡೆದರೂ ಇಲ್ಲಿಗೆ ಭೇಟಿ ನೀಡಲು  ಸಮಯಾವಕಾಶವಿಲ್ಲ. ಮೃತರ ಅಂತ್ಯಕ್ರಿಯೆ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಅವರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಎಂದು ಹಲ್ಯಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಗುರುವಾರ ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಶೀಘ್ರವೇ ಪರಿಹಾರ ಘೋಷಿಸುವ ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ಮಾತನಾಡಿದ ಮಹೇಶ್ ಕುಮಟಳ್ಳಿ, ಮುಖ್ಯಮಂತ್ರಿಗಳ ವಿಪತ್ತು ನಿಧಿ ಯಾವುದಾದರೂ ಯೋಜನೆಯಲ್ಲಿ ಮೃತರ ಕುಟುಂಬಕ್ಕೆ ಸೂಕ್ತವಾದ ಪರಿಹಾರವನ್ನು ಆದಷ್ಟು ಬೇಗ ಕೊಡಿಸಲಾಗುವುದು. 

ಪುತ್ರ ವಿಯೋಗ ಬಹಳ ಕೆಟ್ಟದ್ದು. ದೇವರು ಆ ಕುಟುಂಬದವರಿಗೆ ದುಖಃ ಭರಿಸುವ ಶಕ್ತಿಯನ್ನು ನೀಡಲಿ. ಈ ದುರಂತದಲ್ಲಿ ಶವ ಹೊರತೆಗೆಯಲು ಡಿಸಿ, ಎಸಿ, ಡಿವೈಎಸ್ ಪಿ, ಸಿಪಿಐ, ತಹಶಿಲ್ದಾರ, ಸಾರ್ವಜನಿಕರು, ಎನ್ ಡಿ ಆರ್ ಎಫ್ ಸೇರಿದಂತೆ ಹಲವರು ಸೇರಿ ಅವಿರತವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ತಾಲೂಕು ದಂಡಾಧಿಕಾರಿ ದುಂಡಪ್ಪ ಕುಮಾರ್. ಡಿವೈಎಸ್ಪಿ  ಎಸ್ .ವಿ. ಗಿರೀಶ್.  ಸಿಪಿಐ ಶಂಕರಗೌಡ ಬಸನಗೌಡ, ಯಲ್ಲಾಲಿಂಗ ಪಾಟೀಲ್, ಸುರೇಶ ವಾಡೇದ, ಬಾಳಪ್ಪ ಬಾಗಿ, ಅಜಿತ್ ಸಿಂದೆ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದ ನಾಲ್ವರು ಸಹೋದರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು