5:46 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಹದಗೆಟ್ಟ ರಸ್ತೆ: ನಿದ್ರೆಗೆ ಜಾರಿದ ಪಿಡಬ್ಲ್ಯುಡಿ ಅಧಿಕಾರಿಗಳು; ಶಾಸಕರು ಏನು ಮಾಡುತ್ತಿದ್ದಾರೆ?

03/11/2022, 20:06

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಅಥಣಿ ಪಟ್ಟಣದ ಹೊರವಲಯದ ಸುಮಾರು 5 ಕಿಲೋ ಮೀಟರ್ ರಸ್ತೆ ಹಾಳಾಗಿದ್ದು ದಿನಂಪ್ರತಿ ವಾಹನ ಸವಾರರು ಈ ರಸ್ತೆಯಲ್ಲಿ ಪ್ರಯಾಣಿಸಲು ಸರ್ಕಸ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆ ನಿರ್ಮಿಸಿ ಎಂದು ರಸ್ತೆಯಲ್ಲಿ ಗಿಡನೆಟ್ಟು ಕಾಂಗ್ರೇಸ್ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಅಥಣಿಯಿಂದ ಖಿಳೇಗಾವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಥಣಿ ಗ್ರಾಮೀಣ ಪ್ರದೇಶದಿಂದ ಅಬ್ಬಿಹಾಳವರೆಗೆ ಪೂರ್ಣ ಹದಗೆಟ್ಟಿದೆ. ಬೃಹದಾಕಾರದ ಹೊಂಡಗಳು ಬಿದ್ದಿವೆ. ಇದರಿಂದ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಸ್ಥಿತಿ ಎದುರಾಗಿದೆ. ಅಲ್ಲದೆ ರಸ್ತೆಯ ತುಂಬೆಲ್ಲ ಜಲ್ಲಿ ಕಲ್ಲುಗಳು ಬಿದ್ದಿವೆ, ತಗ್ಗು ಗುಂಡಿಗಳು ಬಿದ್ದಿವೆ. ಇದರಿಂದ ಶಾಲಾ ಮಕ್ಕಳು, ರೈತರು ಮುಖ್ಯವಾಗಿ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಹೋಗಬೇಕಾದ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು