9:40 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಲಿಂಗ ಸಮಾನತೆಗೆ ಹೆಚ್ಚು ಒತ್ತು ಕೊಟ್ಟ ರಾಜ್ಯ ಕರ್ನಾಟಕ: ಸಚಿವ ಹಾಲಪ್ಪ ಬಸಪ್ಪ ಆಚಾರ್

04/11/2022, 00:47

ಬೆಂಗಳೂರು(reporterkarnataka.com) ಕರ್ನಾಟಕ ರಾಜ್ಯ ಮೊದಲಿನಿಂದಲೂ ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ. ಇಲ್ಲಿನ ಮಹಿಳೆಯರು ಇತಿಹಾಸದುದ್ದಕ್ಕೂ ಯಶಸ್ಸನ್ನು ಸಾಧಿಸುತ್ತ ಬಂದವರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅಭಿಪ್ರಾಯಪಟ್ಟರು.
ನಗರದ ಅರಮನೆ ಆವರಣದಲ್ಲಿ ನವೆಂಬರ್ 2ರಿಂದ ಶುರುವಾದ ಬಹುನಿರೀಕ್ಷಿತ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವು ಅದ್ಧೂರಿಯಾಗಿ ನಡೆಯಿತು. ಸಮಾವೇಶದ ಎರಡನೇ ದಿನದಂದು (ನವೆಂಬರ್ 3,2022)ಆಯೋಜಿಸಲಾದ “ADVANCING GENDER DIVERSITY: JOURNEY POST SHATTERING THE GLASS CEILING” ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


‘ಜಾಗತಿಕ ಹೂಡಿಕೆದಾರರ ಸಮಾವೇಶ – 2022ʼರಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು ʼಮಹಿಳಾ ಉದ್ದಿಮೆದಾರರು ಹಾಗೂ ಹಾಗೂ ಬೇರೆ ಬೇರೆ ವೃತ್ತಿಗಳಲ್ಲಿ ನಿರತವಾಗಿರುವ ಮಹಿಳೆಯರಿಗೆ ನಿರಂತರವಾಗಿ ಬೆಂಬಲ ಸಿಗುತ್ತಿದೆ. ಆದರೆ ಮಹಿಳಾ ನೇತೃತ್ವದ ಉದ್ಯಮಗಳ ಉಳಿವಿಗಾಗಿ ಬಂಡವಾಳ ಹಾಗೂ ಮಾರುಕಟ್ಟೆ ಒದಗಿಸುವ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಿದೆ. ಮಹಿಳೆಯರನ್ನು ಅನೌಪಚಾರಿಕ ವಲಯದಿಂದ ಹೊರತರಲು ಹಾಗೂ ಸುಸ್ಥಿರವಾದ ಮಹಿಳಾ ಕೇಂದ್ರಿತ MSME ವಲಯವನ್ನು ನಿರ್ಮಾಣ ಮಾಡುವ ದೃಷ್ಟಿಯಿಂದ ಆಧುನಿಕ ವಲಯಗಳಲ್ಲಿ ಕೌಶಲ್ಯ ಹಾಗೂ ಉದ್ಯಮಶೀಲತೆಯನ್ನು ಹೆಚ್ಚಿಸುವ ಅಗತ್ಯವಿದೆ. ಈಗಾಗಲೇ ತಮ್ಮ ಸಾಧನೆಯ ಮೂಲಕ ಕರ್ನಾಟಕ ಹಾಗೂ ದೇಶಕ್ಕೆ ಹೆಮ್ಮೆ ತಂದ ಎಲ್ಲ ಮಹಿಳಾ ಸಾಧಕರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆʼ ಎಂದು ಅವರು ಹೇಳಿದರು.
ಮೂರು ದಿನಗಳ ಅವಧಿಯ ಈ ಸಮಾವೇಶದಲ್ಲಿ ರಾಷ್ಟ್ರ ಹಾಗೂ ಜಾಗತಿಕ ಮಟ್ಟದ ಪ್ರಮುಖ ಕೈಗಾರಿಕೋದ್ಯಮಿಗಳು, ಜಾಗತಿಕ ಮಟ್ಟದ ಭಾಷಣಕಾರರು, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕೈಗಾರಿಕಾ ಹಾಗೂ ವ್ಯಾಪಾರ ಸಂಘ ಸಂಸ್ಥೆಗಳು ಭಾಗವಹಿಸಿವೆ. ಹಾಗೇ ಸಮಾವೇಶದಲ್ಲಿ ಹಲವಾರು ಪ್ರಚಲಿತ ವಿಷಯಗಳ ಬಗ್ಗೆ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು