10:49 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪೋಷಕರ ಸಭೆಯಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ; ಆರೋಪಿ ಬಂಧನ; ಗಾಯಾಳು ಆಸ್ಪತ್ರೆಗೆ ದಾಖಲು

06/11/2022, 18:05

ಮಂಗಳೂರು(reporterkarnataka.com): ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕರ- ಪೋಷಕರ ಸಭೆಯಲ್ಲಿ ವ್ಯಕ್ತಿಯೊಬ್ಬ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದು,ಆರೋಪಿಯನ್ನು ಬಂಧಿಸಿದ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.

ಕಾಟಿಪಳ್ಳ ಎರಡನೇ ಬ್ಲಾಕ್‌ನ ಶಂಶುದ್ದೀನ್ ಸರ್ಕಲ್ ಬಳಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಪೋಷಕರ ಸಭೆಯ ವೇಳೆ ಮಹಮ್ಮದ್ ಹನೀಫ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾರಾಯಣ ಗುರು ಶಾಲೆಯ ಬಳಿಯ ನಿವಾಸಿ ಚಂದ್ರಕಲಾ ಎಂಬಾಕೆ ಮಹಮ್ಮದ್ ಹನೀಫ್ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಚಂದ್ರಕಲಾ ಅವರಿಗೆ ಆರೋಪಿ ಹನೀಫ್ ಪರಿಚಯವಿದ್ದು, ಪರಿಚಯದ ನೆಲೆಯಲ್ಲಿ ಹನೀಫ್ ಪತ್ನಿಗೆ ಚಂದ್ರಕಲಾ ಅವರು ಸಾಲ ನೀಡಿದ್ದರು. ಆ ಮಹಿಳೆ ಸಾಲವನ್ನು ಹಿಂತಿರುಗಿಸಿರಲಿಲ್ಲ. ಸಾಲವನ್ನು ಹಿಂತಿರುಗಿಸುವಂತೆ ಚಂದ್ರಕಲಾ ಕೇಳಿದ್ದರು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಹನೀಫ್ ಎರಡು ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದ. ಶಾಲೆಯಲ್ಲಿ ಪೋಷಕರ ಸಭೆಯ ಸಂದರ್ಭದಲ್ಲಿ ಚಂದ್ರಕಲಾ ಮತ್ತು ಹನೀಫ್ ಪತ್ನಿಯ ಮಧ್ಯೆ ಜಗಳ ನಡೆದಿದೆ.

ಈ ವೇಳೆ ಕೋಪಗೊಂಡ ಹನೀಫ್ ಏಕಾಏಕಿ ಹಲ್ಲೆ ನಡೆಸಿದ್ದು, ಶಿಕ್ಷಕಿಯ ಬಲಗೈಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದು ಬಂದಿದೆ.
ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು