1:20 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಹೆಬ್ರಿ: ಜಾಗದ ತಕರಾರು; ಇತ್ತಂಡಗಳ ಮಧ್ಯೆ ಗಲಾಟೆ: ಎರಡು ಪ್ರತ್ಯೇಕ ಪ್ರಕರಣಗಳು ದಾಖಲು

06/11/2022, 21:55

ಕಾರ್ಕಳ(reporterkarnataka.com): ಇತ್ತಂಡಗಳ ನಡುವೆ ನಡೆದ ಗಲಾಟೆಯಲ್ಲಿ ಹೆಬ್ರಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.

ಗಲಾಟೆಗೆ ಸಂಬಂಧಿಸಿದಂತೆ ಸುಕುಮಾರ ಶೆಟ್ಟಿ ಎಂಬವರು ನೀಡಿದ ದೂರಿನಲ್ಲಿ, ಗದಗ ಜಿಲ್ಲೆಯಲ್ಲಿ ಇರುವ ಇವರು ಹೆಬ್ರಿಯ ಬೇಳಂಜೆ ಗ್ರಾಮದಲ್ಲಿ ಕುಟುಂಬದ ಜಾಗ ಹೊಂದಿದ್ದಾರೆ. ಈ ಜಾಗಕ್ಕೆ ಸಂಬಂಧಿಸಿ ವಿಭಾಗ ಪತ್ರವು ಅಗಿರುತ್ತದೆ. ಸುಕುಮಾರ ಶೆಟ್ಟಿ ಅಗಾಗ ಬೇಳಂಜೆಗೆ ಬಂದು ಹೋಗುತ್ತಿದ್ದು, ಅದರಂತೆ ನ.4 ರಂದು ಸುಕುಮಾರ ಶೆಟ್ಟಿ ರವರು ತನ್ನ ತಾಯಿಯೊಂದಿಗೆ ಬೇಳಂಜೆಗೆ ಬಂದು ತಮ್ಮ ಜಾಗದಲ್ಲಿ ಜೆಸಿಬಿಯಿಂದ ಕೆಲಸ ಮಾಡಿಸುತ್ತಿರುವಾಗ ಸುಕುಮಾರ ಶೆಟ್ಟಿ ರವರ ಚಿಕ್ಕಮ್ಮಅರುಣ ಬಿ.ಶೆಟ್ಟಿ ಅಲ್ಲಿಗೆ ಬಂದು ಜೆಸಿಬಿಯ ಮುಂದೆ ಅಡ್ಡ ಮಲಗಿದ್ದರು. ಈ ವೇಳೆ ಅವರನ್ನು ಸುಕುಮಾರ ಶೆಟ್ಟಿ ರವರು ತಡೆಯಲು ಹೋದಾಗ
ಅರುಣ ಬಿ ಶೆಟ್ಟಿ ಅವರು ಏಕಾಏಕಿ ಇವರ ಮೇಲೆ ಚೂರಿಯಿಂದ ಹಲ್ಲೆ ಮಾಡಿ ಅವಾಚ್ಯ ಶಬ್ದದಿಂದ ಬೈದು ಜೀವ ಬೆದರಿಕೆ ಹಾಕಿ ಓಡಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ವಿಚಾರವಾಗಿ ಅರುಣ.ಬಿ.ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದು, ಬೇಳಂಜೆ ಗ್ರಾಮದ ನಡುಗುಡ್ಡೆ ಇವರು ತನ್ನ ಗಂಡನೊಂದಿಗೆ ವಾಸವಾಗಿದ್ದಾರೆ. ಅವರಿಗೆ ತಾಯಿಯ ಹೆಸರಿನಲ್ಲಿದ್ದ ಜಾಗದ ಪಾಲಿನ ವಿಚಾರದಲ್ಲಿ ತಕರಾರು ಇದ್ದು, ನ.4 ರಂದು ಮದ್ಯಾಹ್ನ 12:00 ಗಂಟೆಗೆ ತಮ್ಮ ಅಕ್ಕ ಗುಲಾಬಿ ಮತ್ತು ಅವರ ಮಗ ಸುಕುಮಾರ ಇವರು ಜೆ.ಸಿ.ಬಿ ಯಲ್ಲಿ ಅರುಣ.ಬಿ.ಶೇಡ್ತಿ ರವರ ತಾಯಿಯವರಿಗೆ ಸೇರಿದ ಜಾಗದಲ್ಲಿ ಕೆಲಸ ಮಾಡಿಸುವಾಗ ಅಲ್ಲಿಗೆ ಹೋಗಿ ಈ ಜಾಗವು ತಾಯಿಯ ಹೆಸರಿನಲ್ಲಿದೆ. ಇಲ್ಲಿ ಕೆಲಸ ಮಾಡಬೇಡಿ ಎಂದು ಹೇಳಿ ತಡೆಯಲು ಹೋದಾಗ ಆರೋಪಿತರು ಅವಾಚ್ಯಶಬ್ದದಿಂದ ಬೈದು ಹೊಡೆದು ಹಲ್ಲೆ ಮಾಡಿ ಅಲ್ಲಿಯೇ ಇದ್ದ ಅವರಣ ಇರದ ಬಾವಿಗೆ ದೂಡಿ ಕೊಲೆ ಮಾಡಲು ಪ್ರಯತ್ನಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು