10:41 PM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಜ್ಯೋತಿ ಥಿಯೇಟರ್ ಸಮೀಪ ಬಸ್ ಬೇ ನಿರ್ಮಾಣ: ಟ್ರಾಫಿಕ್ ಜಾಮ್ ತಡೆಗೆ ಕ್ರಮ; ಮೇಯರ್, ಶಾಸಕರಿಂದ ಸ್ಥಳ ಪರಿಶೀಲನೆ

01/07/2021, 18:18

ಮಂಗಳೂರು(reporterkarnataka news):

ನಗರದ ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ  ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು. 

ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ನಿವಾರಿಸಲು ಇದು ಸಹಕಾರಿಯಾಗಿದೆ. ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಿಂದ ಬಂಟ್ಸ್ ಹಾಸ್ಟೆಲ್ ಮೂಲಕ ಹಾದು ಹೋಗುವ ಬಸ್ ಗಳು ರಸ್ತೆಯಲ್ಲಿಯೇ ನಿಲ್ಲಿಸುವುದರಿಂದ ಈ ಭಾಗದಲ್ಲಿ ವಿಪರೀತ ಟ್ರಾಫಿಕ್ ಜಾಮ್ ಉಂಟಾಗುತಿದ್ದು ಬಸ್ ಬೇ ನಿರ್ಮಾಣವಾದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು‌. 

ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಬಸ್ ಬೇ ನಿರ್ಮಾಣಕ್ಕಾಗಿ ಜಾಗ ಗುರುತಿಸಲಾಗಿದೆ. ಜ್ಯೋತಿ ಟಾಕೀಸ್ ಪಕ್ಕದಲ್ಲಿ ಬಸ್ ಬೇ ನಿರ್ಮಿಸುವುದರಿಂದ ಇಲ್ಲಿನ ವಾಹನ ದಟ್ಟಣೆ ನಿವಾರಣೆಯಾಗಲಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಸ್ಮಾರ್ಟ್ ಸಿಟಿ ಅಧಿಕಾರಿಗಳು, ನಗರ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು