7:40 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಬಿಜೆಪಿ ಡಬಲ್ ಇಂಜಿನ್ ಸರಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು, ಅವರದ್ದು ಸಂಕಷ್ಟ ಯಾತ್ರೆ: ಯು. ಟಿ. ಖಾದರ್

08/11/2022, 22:48

ಮಂಗಳೂರು(reporterkarnataka.com) : ಬಿಜೆಪಿ ಮಾಡುತ್ತಿರುವುದು ಜನ ಸಂಕಲ್ಪ ಯಾತ್ರೆ ಅಲ್ಲ ಸಂಕಷ್ಟ ಯಾತ್ರೆ ಮತ್ತು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ.

ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಡಬಲ್ ಇಂಜಿನ್ ಸರಕಾರ ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬಂದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಸ್ತೆಗಳ ಗುಂಡಿಗಳನ್ನು ಮುಚ್ಚಿಸುವ ತಾಕತ್ತು ಸರಕಾರಕ್ಕೆ ಇಲ್ಲ. ಮುಖ್ಯ ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿದ್ದು, ನನ್ನ ಕ್ಷೇತ್ರದ ಪಿಡಬ್ಲ್ಯುಡಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಿಸಲು 5 ಲಕ್ಷ ರೂ. ಅನುದಾನ ಮಂಜೂರಾಗಿದೆ. ನಿಜವಾಗಿ ಕನಿಷ್ಠ 50 ಲಕ್ಷ ರೂ.ಗಳಾದರೂ ಬೇಕಾಗಿದೆ. ಶಾಸಕ ನಿಧಿಯನ್ನು ಬಳಸಿಕೊಂಡು ದೇರಳಕಟ್ಟೆ ಸೇರಿದಂತೆ ನನ್ನ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್‌ನ ಭರವಸೆ, ಘೋಷಣೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ಪಣಜಿಯಿಂದ ಮಂಗಳೂರಿಗೆ ವಾಟರ್ ವೇ ಇನ್ನೂ ಆರಂಭ ಆಗಿಲ್ಲ. ಸಾಗರ ಮಾಲ ಯೋಜನೆ ಬಗ್ಗೆ ಕಳೆದ ಐದು ವರ್ಷಗಳಿಂದ ಮಾತನಾಡುತ್ತಿದ್ದಾರೆ. ಮೀನುಗಾರರಿಗೆ ಮನೆ ಕೊಡುವುದಾಗಿ ಹೇಳಿ ಇನ್ನೂ ಕೊಟ್ಟಿಲ್ಲ. ಒಳನಾಡು ಮೀನುಗಾರಿಕೆಯಡಿ ಸಿಗಡಿ ಕೃಷಿ ಇನ್ನೂ ಗುರಿ ತಲುಪಿಲ್ಲ. ಕೇರಳ ಮಾದರಿ ಸಾಲ ಪರಿಹಾರ ಆಯೋಗ ರಚನೆ ಇನ್ನೂ ಆಗಿಲ್ಲ ಎಂದರು.

ಒಟ್ಟಿನಲ್ಲಿ ಮೀನುಗಾರರಿಗೆ ಬಿಜೆಪಿ ಸರಕಾರ ಮೋಸ ಮಾಡಿದ್ದಷ್ಟು ಯಾರೂ ಮಾಡಿಲ್ಲ. ಮೀನುಗಾರರ ಮುಗ್ಧತೆಯ ಲಾಭ ಪಡೆಯುತ್ತಾರೆ ಎಂದು ಯು.ಟಿ.ಖಾದರ್ ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು