6:24 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬಿಜೆಪಿ ಡಬಲ್ ಇಂಜಿನ್ ಸರಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು, ಅವರದ್ದು ಸಂಕಷ್ಟ ಯಾತ್ರೆ: ಯು. ಟಿ. ಖಾದರ್

08/11/2022, 22:48

ಮಂಗಳೂರು(reporterkarnataka.com) : ಬಿಜೆಪಿ ಮಾಡುತ್ತಿರುವುದು ಜನ ಸಂಕಲ್ಪ ಯಾತ್ರೆ ಅಲ್ಲ ಸಂಕಷ್ಟ ಯಾತ್ರೆ ಮತ್ತು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದಲ್ಲಿ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ವ್ಯಂಗ್ಯವಾಡಿದ್ದಾರೆ.

ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಡಬಲ್ ಇಂಜಿನ್ ಸರಕಾರ ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬಂದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಸ್ತೆಗಳ ಗುಂಡಿಗಳನ್ನು ಮುಚ್ಚಿಸುವ ತಾಕತ್ತು ಸರಕಾರಕ್ಕೆ ಇಲ್ಲ. ಮುಖ್ಯ ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿದ್ದು, ನನ್ನ ಕ್ಷೇತ್ರದ ಪಿಡಬ್ಲ್ಯುಡಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಿಸಲು 5 ಲಕ್ಷ ರೂ. ಅನುದಾನ ಮಂಜೂರಾಗಿದೆ. ನಿಜವಾಗಿ ಕನಿಷ್ಠ 50 ಲಕ್ಷ ರೂ.ಗಳಾದರೂ ಬೇಕಾಗಿದೆ. ಶಾಸಕ ನಿಧಿಯನ್ನು ಬಳಸಿಕೊಂಡು ದೇರಳಕಟ್ಟೆ ಸೇರಿದಂತೆ ನನ್ನ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್‌ನ ಭರವಸೆ, ಘೋಷಣೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ಪಣಜಿಯಿಂದ ಮಂಗಳೂರಿಗೆ ವಾಟರ್ ವೇ ಇನ್ನೂ ಆರಂಭ ಆಗಿಲ್ಲ. ಸಾಗರ ಮಾಲ ಯೋಜನೆ ಬಗ್ಗೆ ಕಳೆದ ಐದು ವರ್ಷಗಳಿಂದ ಮಾತನಾಡುತ್ತಿದ್ದಾರೆ. ಮೀನುಗಾರರಿಗೆ ಮನೆ ಕೊಡುವುದಾಗಿ ಹೇಳಿ ಇನ್ನೂ ಕೊಟ್ಟಿಲ್ಲ. ಒಳನಾಡು ಮೀನುಗಾರಿಕೆಯಡಿ ಸಿಗಡಿ ಕೃಷಿ ಇನ್ನೂ ಗುರಿ ತಲುಪಿಲ್ಲ. ಕೇರಳ ಮಾದರಿ ಸಾಲ ಪರಿಹಾರ ಆಯೋಗ ರಚನೆ ಇನ್ನೂ ಆಗಿಲ್ಲ ಎಂದರು.

ಒಟ್ಟಿನಲ್ಲಿ ಮೀನುಗಾರರಿಗೆ ಬಿಜೆಪಿ ಸರಕಾರ ಮೋಸ ಮಾಡಿದ್ದಷ್ಟು ಯಾರೂ ಮಾಡಿಲ್ಲ. ಮೀನುಗಾರರ ಮುಗ್ಧತೆಯ ಲಾಭ ಪಡೆಯುತ್ತಾರೆ ಎಂದು ಯು.ಟಿ.ಖಾದರ್ ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು