4:33 AM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಸಿಆರ್ ಝಡ್ ನಿಯಮ ಸಡಿಲಿಕೆ ಪ್ರವಾಸೋದ್ಯಮ‌ಕ್ಕೆ ಪೂರಕ: ಉಡುಪಿ ಟೂರಿಸಂ ಕನೆಕ್ಟ್ – 2022 ಕಾರ್ಯಾಗಾರಕ್ಕೆ ಚಾಲನೆ

09/11/2022, 14:29

ಉಡುಪಿ(reporterkarnataka.com): ಕರಾವಳಿ ಪ್ರವಾಸೋದ್ಯಮ ಸಂಘಟನೆ, ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಆಯೋಜಿಸಿರುವ “ಉಡುಪಿ ಟೂರಿಸಂ ಕನೆಕ್ಟ್ – 2022” ಕಾರ್ಯಾಗಾರಕ್ಕೆ ಶಾಸಕ ರಘುಪತಿ ಭಟ್ ಇಂದು ಉಡುಪಿಯ ಹೋಟೆಲ್ ಕಿದಿಯೂರಿನ ಶೇಷಶಯನ ಸಭಾಂಗಣದಲ್ಲಿ ಚಾಲನೆ ನೀಡಿದರು.
ಬಳಿಕ‌ ಮಾತನಾಡಿದ ಶಾಸಕರು, ಉಡುಪಿ ಜಿಲ್ಲೆಯಲ್ಲಿಯೂ ಅತ್ಯಂತ ಸುಂದರ ಬೀಚ್ ಗಳಿವೆ. ಗೋವಾಕ್ಕಿಂತಲೂ ಸ್ವಚ್ಛ ಹಾಗೂ ಸುಂದರವಾದ ಬೀಚ್ ಗಳು ನಮ್ಮಲ್ಲಿವೆ. ಆದರೆ ಅವುಗಳು ಸೂಕ್ತ ಮೂಲಭೂತ ಸೌಕರ್ಯಗಳ ಕೊರತೆಯಿಂದ ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ವಿಫಲವಾಗುತ್ತಿವೆ. ಕೇಂದ್ರ ಸರ್ಕಾರ ಸಿಆರ್ ಝಡ್ ನಿಯಮದಲ್ಲಿ‌ ಸಡಿಲಿಕೆ ಮಾಡಿರುವುದರಿಂದ ಪ್ರವಾಸೋದ್ಯಮ‌ದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.


ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಮೊಹಮ್ಮದ್ ಫಾರೂಕ್, ರಾಜ್ಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಬಿ, ಕೆನರಾ ಬ್ಯಾಂಕ್ ಮಣಿಪಾಲ ಶಾಖೆಯ ಜನರಲ್ ಮ್ಯಾನೇಜರ್ ರಾಮ ನಾಯ್ಕ್, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ್ ಶೆಟ್ಟಿ, ಉಪಾಧ್ಯಕ್ಷ ನಾಗರಾಜ ಹೆಬ್ಬಾರ್, ಕಾರ್ಯದರ್ಶಿ ಗೌರವ್ ಶಣವ, ಕೋಶಾಧಿಕಾರಿ ಚಂದ್ರಕಾಂತ್ ಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು