1:37 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜ್‌ನಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ

09/11/2022, 22:41

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(Reporterkarnataka.com): ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು.



ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಆಯುಕ್ತರಾದ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭಾರತದಲ್ಲಿ ಇರುವಷ್ಟು ಕಾನೂನು ಬೇರೆಲ್ಲಿಯೂ ಇಲ್ಲ ಆದರೆ ಸರಿಯಾಗಿ ಬಳಸಿಕೊಳ್ಳಲು ಆಗುತ್ತಿಲ್ಲ, ಹೊಸ ಕಾನೂನು ಜಾರಿಗೆ ಬಂದಾಗ ಅದರಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎನ್ನುವಂತಹ ರಿಸರ್ಚ್ ನಡೆಯುತ್ತದೆ. ಕಾನೂನು ಪಾಲನೆಗೆ ಎಲ್ಲರೂ ಆದ್ಯತೆ ನೀಡಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರು ಇಂಟರ್‌ನ್ಯಾಷನಲ್ ಜಸ್ಟಿಸ್ ಮಿಷನ್ ವಿಭಾಗ ಮುಖ್ಯಸ್ಥರಾದ ಪ್ರತಿಮಾ ಎಂ., ಮಾನವ ಕಳ್ಳ ಸಾಗಾಣಿಕೆಗೆ ವಿದ್ಯಾರ್ಥಿಗಳು ತೆಗೆದು ಕೊಳ್ಳಬೇಕಾದ ಕ್ರಮ ದ ಬಗ್ಗೆ ಜಾಗೃತಿ ಮೂಡಿಸಿದರು.


ವಿಶ್ವವಿದ್ಯಾಲಯ ಕಾಲೇಜ್‌ನ ಪ್ರಿನ್ಸಿಪಾಲ್ ಡಾ.ಅನಸೂಯ ರೈ ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಇಂಚರ ಫೌಂಡೇಶನ್ ಯೋಗೀಶ್ ಮಲ್ಲಿಗೆ ಮಾಡು ಪುನರ್ವಸತಿಯ ಬಗ್ಗೆ ಮಾಹಿತಿ ನೀಡಿದರು.


ಎ. ಎಚ್. ಟಿ. ಸಿ. ಚೇರ್ಮ್ಯಾನ್ ಪ್ರೋ.ಜಯರಾಜ್ ಅಮೀನ್ ಸ್ವಾಗತಿಸಿದರು. ಡಾ.ಗಾಯತ್ರಿ ನಿರೂಪಿಸಿದರು. ಎ.ಎಚ್.ಟಿ.ಸಿ. ಸದಸ್ಯ ಕಾರ್ಯದರ್ಶಿ ಡಾ.ನಾಗರತ್ನ ಕೆ.ಎ.ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು