1:38 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ: ಶಾಸಕ ವೇದವ್ಯಾಸ ಕಾಮತ್

10/11/2022, 22:31

ಮಂಗಳೂರು(reporterkarnataka.com): ಹಿಂದೂ ಎಂಬುದು ಅಶ್ಲೀಲ ಪದ ಎಂದಿರುವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.

ಕಾಂಗ್ರೆಸಿಗರಿಗೆ ಹಿಂದೂ ಎನ್ನುವ ಪದದಿಂದ ಅಲರ್ಜಿ ಉಂಟಾಗಿದೆ. ಈ ಹಿಂದೆ ಸಿದ್ಧರಾಮಯ್ಯನವರು ತಿಲಕ ಧರಿಸಿದವರನ್ನು ಕಂಡರೆ ಭಯವಾಗುತ್ತದೆ ಎಂದಿದ್ದರು. ಮಾಂಸಾಹಾರ ಸೇವಿಸಿ ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ಕೊಟ್ಟಾಗಲೂ ಉಡಾಫೆಯಿಂದ ವರ್ಸಿದ್ದರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಹಿಂದೂ ಧಾರ್ಮಿಕ ಭಾವನೆಗಳಿಗೆ ವಿರೋಧ ವ್ಯಕ್ತಪಡಿಸುವ‌ ಕಾಂಗ್ರೆಸ್ ನಾಯಕರಿಗೆ ಒಂದು ಹಿಂದೂ ಸಮಾಜವನ್ನು ಅವಹೇಳನ ಮಾಡುವ ಚಾಳಿ ಹಿಡಿದಿದೆ. ಸತೀಶ್ ಜಾರಕಿಹೊಳಿ ಅವರು ಕೇವಲ ಕ್ಷಮೆ ಕೇಳುವುದರಿಂದ ಎಲ್ಲವೂ ಸರಿಪಡಿಸಲಾಗುವುದಿಲ್ಲ‌. ಕಾಂಗ್ರೆಸ್ ನಾಯಕರಿಗೆ ನಿಜವಾಗಿಯೂ ಹಿಂದೂ ಧರ್ಮದ ಮೇಲೆ ಗೌರವವಿದ್ದರೆ ಕಾಂಗ್ರೆಸ್ ಕಾರ್ಯಾಧ್ಯಕ್ಷರನ್ನು ವಜಾಗೊಳಿಸಲಿ ಎಂದು ಶಾಸಕ ಕಾಮತ್ ಸವಾಲು ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು