2:03 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ

11/11/2022, 18:46

ಪುತ್ತೂರು(reporterkarnataka): ಸಂತ ಪಿಲೋಮಿನಾ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ವಿದ್ಯಾರ್ಥಿ ಸಂಘ ಜಂಟಿಯಾಗಿ 2022-23ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಗಣೇಶ್ ಭಟ್ ವಹಿಸಿ,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿಗಳು ಮತ್ತು ಅವುಗಳನ್ನು ನಿಭಾಯಿಸುವ ಪರಿ ಹೇಗೆ ಎನ್ನುವ ನುಡಿಗಳೊಂದಿಗೆ 64 ವರ್ಷಗಳ ಇತಿಹಾಸವುಳ್ಳ ಈ ಕಾಲೇಜಿನ ಆಶೋತ್ತರಗಳಿಗೆ ಸದಾ ಸ್ಪಂದಿಸುವ ಮನೋಭಾವವನ್ನು ಹೊಂದಿರಬೇಕು ಹಾಗೂ ಕಾಲೇಜಿನ ಶಿಸ್ತು ಪರಿಪಾಲನೆಯ ಕಡೆಗೆ ವಿಶೇಷ ಗಮನ ಹರಿಸಬೇಕು. ಎಂದು ಕರೆ ನೀಡಿದರು.

ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ.ಪಿ.ರಾಧಾಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ನಾಯಕತ್ವಗುಣ ಹಾಗೂ ಕಾಲೇಜಿನಲ್ಲಿ ದೊರಕುವ ಅವಕಾಶಗಳ ಸದುಪಯೋಗದಿಂದ ಕ್ರಿಯಾಶೀಲರಾಗಿ ಮುನ್ನಡೆದು ಮುಂದೆ ದೇಶದ ಸಜೆಗಳಾಗಿ ಬಾಳಬೇಕು ಎಂದು
ನುಡಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ಚಂದ್ರಶೇಖರ್ ಹಾಗೂ ಭಾರತಿ ಎಸ್. ರೈ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಕಾರ್ಯನಿರ್ವಹಿಸುವ ವಿಧಾನದ ಬಗ್ಗೆ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ವಿನ್ಸನ್ ಜೋಯ್ ಮಿನೇಜಸ್ ಹಾಗೂ ನಾಗ ಪ್ರಸಾದ್ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಅಕಿ‌ ಸ್ವಾಗತಿಸಿದರು.
ಜೊತೆ ಕಾರ್ಯದರ್ಶಿ ಶಿವಾನಿ ವಂದಿಸಿ, ಕಾರ್ಯದರ್ಶಿ ಅನುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು