3:13 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ

11/11/2022, 18:46

ಪುತ್ತೂರು(reporterkarnataka): ಸಂತ ಪಿಲೋಮಿನಾ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ವಿದ್ಯಾರ್ಥಿ ಸಂಘ ಜಂಟಿಯಾಗಿ 2022-23ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಗಣೇಶ್ ಭಟ್ ವಹಿಸಿ,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿಗಳು ಮತ್ತು ಅವುಗಳನ್ನು ನಿಭಾಯಿಸುವ ಪರಿ ಹೇಗೆ ಎನ್ನುವ ನುಡಿಗಳೊಂದಿಗೆ 64 ವರ್ಷಗಳ ಇತಿಹಾಸವುಳ್ಳ ಈ ಕಾಲೇಜಿನ ಆಶೋತ್ತರಗಳಿಗೆ ಸದಾ ಸ್ಪಂದಿಸುವ ಮನೋಭಾವವನ್ನು ಹೊಂದಿರಬೇಕು ಹಾಗೂ ಕಾಲೇಜಿನ ಶಿಸ್ತು ಪರಿಪಾಲನೆಯ ಕಡೆಗೆ ವಿಶೇಷ ಗಮನ ಹರಿಸಬೇಕು. ಎಂದು ಕರೆ ನೀಡಿದರು.

ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ.ಪಿ.ರಾಧಾಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ನಾಯಕತ್ವಗುಣ ಹಾಗೂ ಕಾಲೇಜಿನಲ್ಲಿ ದೊರಕುವ ಅವಕಾಶಗಳ ಸದುಪಯೋಗದಿಂದ ಕ್ರಿಯಾಶೀಲರಾಗಿ ಮುನ್ನಡೆದು ಮುಂದೆ ದೇಶದ ಸಜೆಗಳಾಗಿ ಬಾಳಬೇಕು ಎಂದು
ನುಡಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ಚಂದ್ರಶೇಖರ್ ಹಾಗೂ ಭಾರತಿ ಎಸ್. ರೈ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಕಾರ್ಯನಿರ್ವಹಿಸುವ ವಿಧಾನದ ಬಗ್ಗೆ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ವಿನ್ಸನ್ ಜೋಯ್ ಮಿನೇಜಸ್ ಹಾಗೂ ನಾಗ ಪ್ರಸಾದ್ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಅಕಿ‌ ಸ್ವಾಗತಿಸಿದರು.
ಜೊತೆ ಕಾರ್ಯದರ್ಶಿ ಶಿವಾನಿ ವಂದಿಸಿ, ಕಾರ್ಯದರ್ಶಿ ಅನುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು