11:17 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಸಂಘದಿಂದ ರಾಟ್ ಫೆಸ್ಟ್

11/11/2022, 20:49

ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಸಂಘದ ವತಿಯಿಂದ ROT (ರಾಟ್) ಫೆಸ್ಟ್ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೆನರಾ ಸಮೂಹ ಸಂಸ್ಥೆಯ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ನೆರವೇರಿಸಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವವನ್ನು ಬೆಳೆಸಬಹುದು ಹಾಗೂ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಬಾಗವಹಿಸುವುದರಿಂದ ನಮ್ಮಲ್ಲಿ ಸಕಾರಾತ್ಮಕ ಚಿಂತನೆ ಬೆಳೆಯಲು ಸಹಕಾರವಾಗುತ್ತದೆ ಎಂದರು.
ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾಲೇಜಿನ ಹೆಸರನ್ನು ಸಮಾಜಕ್ಕೆ ಎತ್ತಿ ತೋರಿಸಬೇಕು ಎಂದರು.

ಅಧ್ಯಕ್ಷೀಯ ಭಾಷಣವನ್ನು ಪ್ರಾಂಶುಪಾಲೆ ಡಾ. ಪ್ರೇಮಲತಾ. ವಿ. ನೆರವೇರಿಸಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮುಂದಕ್ಕೆ ಅಂತರ್ ಕಾಲೇಜು ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಹಕಾರಿಯಾಗುತ್ತದೆ ಎಂದರು.


ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದ ಮುಖ್ಯಸ್ಥೆ ದೇಜಮ್ಮ ಮಾತನಾಡಿ ವಿದ್ಯಾರ್ಥಿಗಳಲ್ಲಿ ಹೊಸ ಚಿಂತನೆ, ಅನ್ವೇಷಣೆ ಬಂದಲ್ಲಿ ಮಾತ್ರ ಅದೊಂದು ಪ್ರಯೋಜನಕಾರಿ ಫಲ ನೀಡಲು ಸಾಧ್ಯ ಎಂದರು.
ಕಾರ್ಯಕ್ರಮದ ಸಂಯೋಜಕರಾದ ಉಷಾ ನಾಯಕ್ ಹಾಗೂ ಆಶಾಲತಾ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ನರಸಿಂಹ ಭಟ್ ಸ್ವಾಗತಿಸಿದರು. ಸಹ ಕಾರ್ಯದರ್ಶಿ ತೃಪ್ತಿ ವ್ಯಾಸ್ ರಾಟ್ ಬಗ್ಗೆ ತಿಳಿಸಿದರು. ಸಂಜನಾ ಕಾರ್ಯಕ್ರಮ ನಿರೂಪಿಸಿದರು. ಸ್ಪಂದನಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು