3:42 PM Monday21 - July 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ…

ಇತ್ತೀಚಿನ ಸುದ್ದಿ

19ರಂದು ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಖ್ಯಮಂತ್ರಿ ಬೊಮ್ಮಾಯಿ ಲೋಕಾರ್ಪಣೆ

12/11/2022, 19:22

ಮಂಗಳೂರು(reporterkarnataka.com): ಕ್ರಿಸ್ತ ಶಕ 1837ರಲ್ಲಿ ಬ್ರಿಟಿಷರ ವಿರುದ್ಧ ರೈತ ಸೇನೆ ಕಟ್ಟಿ, ಸ್ಮರಣೀಯ ಹೋರಾಟ ನಡೆಸಿದ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಇದೇ ನವೆಂಬರ್ 19ರ ಶನಿವಾರ ಮುಖ್ಯಮಂತ್ರಿಗಳಿಂದ ಅದ್ದೂರಿಯಾಗಿ ಲೋಕಾರ್ಪಣೆಯಾಗಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಅವರು ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನಸಾಮಾನ್ಯರ ಮತ್ತು ರೈತರ ಮೇಲೆ ಬ್ರಿಟಿಷರ ಕ್ರೌರ್ಯ ಹಾಗೂ ದಬ್ಬಾಳಿಕೆಯನ್ನು ಸಹಿಸದೆ ಕೆದಂಬಾಡಿ ರಾಮಯ್ಯ ಗೌಡರು ಬ್ರಿಟಿಷರ ವಿರುದ್ಧ ರೈತ ಸೇನೆ ಕಟ್ಟಿ ರಣ ಕಹಳೆ ಮೊಳಗಿಸಿದ್ದರು, ಆ ಪರಿಣಾಮ ಬೆಳ್ಳಾರೆ, ಪುತ್ತೂರು, ಬಂಟ್ವಾಳ, ಮಂಗಳೂರು ಸೇರಿದಂತೆ ಕೆದಂಬಾಡಿ ರಾಮಯ್ಯ ಗೌಡರ ಮನೆಯಿಂದ ಹೊರಟ ಸೈನ್ಯ ಸುಮಾರು 90 ಕಿ.ಮೀ.ದೂರದ ಪ್ರದೇಶದಲ್ಲಿ ರಾಮಯ್ಯ ಗೌಡರ ನೇತೃತ್ವದಲ್ಲಿ 13 ದಿನಗಳ ಕಾಲ ಸ್ಥಾಪಿತ ಸರಕಾರವನ್ನು ಮುನ್ನಡೆಸಲಾಯಿತು, ಇದು ಭಾರತದ ನೆಲದಲ್ಲಿ ಬ್ರಿಟಿಷರಿಗೆ ಒದಗಿದ ಪ್ರಥಮ ಸೋಲು ಹಾಗೂ ಭಾರತದ ಸಾಮಾನ್ಯ ಜನರಿಗೆ ಬ್ರಿಟಿಷರ ವಿರುದ್ಧ ದೊರಕಿದ ಪ್ರಪ್ರಥಮ ಜಯ. ಈ ಹೋರಾಟದಲ್ಲಿ ಹುತಾತ್ಮರಾದ ಅವರು ಹೋರಾಟವನ್ನು ಶಾಶ್ವತವಾಗಿ ಭಾರತದ ಇತಿಹಾಸ ಪುಟಗಳಲ್ಲಿ ದಾಖಲಿಸಿ ಸ್ಮಾರಕ ನಿರ್ಮಾಣದ ಮೂಲಕ ಅವರ ಹೆಸರನ್ನು ಈ ನಾಡಿನಲ್ಲಿ ಶಾಶ್ವತವಾಗಿ ಉಳಿಸಲು ಮಂಗಳೂರಿನ ಚಾರಿತ್ರಿಕ ಸ್ಥಳವಾದ ಬಾವುಟಗುಡ್ಡೆಯಲ್ಲಿ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ನ.19ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಮಹಾ ಸ್ವಾಮೀಜಿಯವರು ಅದ್ದೂರಿಯಾಗಿ ಲೋಕಾರ್ಪಣೆ ಮಾಡುವರು, ನಂತರ ನೆಹರೂ ಮೈದಾನದ ಫುಟ್ ಬಾಲ್ ಕ್ರೀಡಾಂಗಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಅಂದಾಜು 25,000ಕ್ಕೂ ಹೆಚ್ಚು ಜನರು ಭಾಗವಹಿಸುವರು. ಅಲ್ಲಿ ವಿವಿಧ ಇಲಾಖೆಗಳ ವತಿಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಸಹ ನೆರವೇರಿಸಲಾಗುವುದು. ಒಟ್ಟಾರೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದು ತಿಳಿಸಿದರು.
ಇದಕ್ಕೆ ಸಂಬಂಧಿಸಿದಂತೆ ಸುಸಜ್ಜಿತ ವೇದಿಕೆ ನಿರ್ಮಾಣ, ಎಲ್ ಇ ಡಿ ಅಳವಡಿಕೆ, ಕುರ್ಚಿಗಳು, ಅತಿಥಿಗಳಿಗೆ ಉಟೋಪಚಾರ, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕೊಡಗು ಸೇರಿದಂತೆ ವಿವಿಧೆಡೆಯಿಂದ ಬರುವ ಕೆದಂಬಾಡಿ ರಾಮಯ್ಯ ಗೌಡರ ಅಭಿಮಾನಿಗಳನ್ನು ಕರೆತರಲು ಅಗತ್ಯ ಬಸ್ ಗಳ ವ್ಯವಸ್ಥೆ ಮಾಡಿಕೊಳ್ಳಬೇಕಿದೆ, ಕಾರ್ಯಕ್ರಮದ ಆಯೋಜನೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಪ್ರಮುಖ ಪಾತ್ರ ವಹಿಸಬೇಕಾಗಿದ್ದು, ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗುವುದು ಈ ಕಾರ್ಯಕ್ರಮಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರುಗಳು ದಕ್ಷಿಣ ಕನ್ನಡ ಹಾಗೂ ಕೊಡಗಿನ ಶಾಸಕರು ಆಗಮಿಸಲಿದ್ದಾರೆ ಎಂದು ಹೇಳಿದರು.

ಅಂದು ವಿವಿಧಡೆಯಿಂದ ಮಂಗಳೂರಿಗೆ ಬಸ್ಸುಗಳಲ್ಲಿ ಆಗಮಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡಬೇಕು, ಸಂಚಾರಕ್ಕೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಹಾಗೂ ಸೂಕ್ತ ಭದ್ರತೆ ಒದಗಿಸುವಂತೆ ಟ್ರಾಫಿಕ್ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರಿಗೆ ಶಾಸಕರು ಸೂಚಿಸಿದರು.

ಜಿಲ್ಲೆಯ ಸಾರ್ವಜನಿಕರು ಹಾಗೂ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು, ಈ ಕಾರ್ಯಕ್ರಮದಲ್ಲಿ ಸರ್ವ ಜನಾಂಗದವರು ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.

ಮಂಗಳೂರು ಮೇಯರ್ ಜಯಾನಂದ ಅಂಜನ್, ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ರಮೇಶ್ ವೇದಿಕೆಯಲ್ಲಿದ್ದರು.

ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರುಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷ ಕಿರಣ್ ಬುಡ್ಲೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಸೇರಿದಂತೆ ಆನಂದ್, ಸುರೇಶ್ ಬೈಲು, ಶರಣ್, ಭಾಸ್ಕರ್ ದೇವಪ್ಪ ಹಾಗೂ ಇತರೆ ಪದಾಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು