12:57 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಬಸನಗೌಡ ಬಾದರ್ಲಿ ಭೇಟಿ: ಸಹಾಯ ಹಸ್ತ ವಿತರಣೆ

02/07/2021, 07:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಸಹಾಯ ಹಸ್ತ ಚಾಚಲು ಮುಂದೆ ಬಂದಿದ್ದಾರೆ.

ತಾಲೂಕಿನಲ್ಲಿ ಕೊರೊನಾದಿಂದ ಸಾವು-ನೋವು ಹಾಗೂ ಉದ್ಯೋಗ ಕಳೆದುಕೊಂಡವರ, ಆರ್ಥಿಕವಾಗಿ ಸಂಕಷ್ಟಕೀಡಾದ ರೈತರು, ಕಾರ್ಮಿಕರ, ಬಡವರ, ಕಷ್ಟಗಳನ್ನು ಆಲಿಸಿದ ಬಾದರ್ಲಿ ಅವರು ಬಾದರ್ಲಿ ಜಿಪಂ ವ್ಯಾಪ್ತಿಯಲ್ಲಿ ಮೃತರಾದ ಬಾದರ್ಲಿಯ ದೂಗಪ್ಪ ನಾಯಕ, ಅಲಬನೂರಿನ ಕೆ. ಬಸವರಾಜಪ್ಪ, ಹರೇಟನೂರನ ದೇವರಾಜ ನಾಯಕ, ಗಿಣಿವಾರದ ವೆಂಕನಗೌಡ ಕೋಟೆಗೋಡೆ ಮತ್ತು ಬಿ.ವೆಂಕಟೇಶ ಅವರ ಕುಂಟುಬಕ್ಕೆ ಭೇಟಿ ನೀಡಿ ಮೃತರ ಕುಂಟುಂಬಸ್ಥರಿಗೆ ಆತ್ಮಸ್ಥೆರ್ಯ ತುಂಬಿ ತಲಾ 10 ಸಾವಿರ ರೂ.ಗಳ ಧನ ಸಹಾಯ ನೀಡಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅವರು,

ಸರಕಾರ ಮೃತರ ಸಂಖ್ಯೆಯಲ್ಲಿ ಸುಳ್ಳು ವರದಿ ನೀಡುತ್ತಿದ್ದು, ಸರಿಯಾದ ವರದಿಯನ್ನು ತರಿಸಿಕೊಂಡು ಮೃತರಿಗೆ ತಲಾ 5 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. 

ಇಂತಹ ಕಾರ್ಯಗಳು ಮಾಡುವುದರಿಂದ ಅವರಿಗೆ ಅವರ ಕುಟುಂಬ ಶಾಂತಿ ನಮ್ಮದೇ ಸಿಗುತ್ತದೆಂದು ಸೋಮನಾಥ ಶಿವಾಚಾರ್ಯರು ಬಾಳೆಹೊನ್ನೂರು ಪೀಠ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ವೆಂಕಟೇಶ ರಾಗಲಪರ್ವಿ, ಶಿವಕುಮಾರ ಜವಳಿ, ಫಕೀರಯ್ಯ ರಾಗಲಪರ್ವಿ ದೇವಪ್ಪ ಅಲಬನೂರು ಆರ್. ಪಂಪಾಪತಿ, ಮುನ್ನಾ, ಹಾಗೂ ಗ್ರಾಮ ಪಂ.ಸ. ಹುಚ್ಚಪ್ಪ ಹರೇಟನೂರು ಚನ್ನಪ್ಪ ಅಲಬನೂರು ಯಂಕನಗೌಡ ಮಾಜಿ ತಾ.ಪಂ.ಸ ಮಲ್ಲರಡ್ಡಿ, ಗ್ರಾ.ಪಂ.ಸ. ಮಾಹಾದೇವ, ಪಕೀರಪ್ಪ, ನಾಗಪ್ಪ ಮಾ.ಗ್ರಾ.ಪಂ.ಸ. ರಾಮನಗೌಡ, ಸಿದ್ದನಗೌಡ, ಬಸವರಾಜ ನಾಯಕ, ಬಸವರಾಜ, ವೆಂಕಟೇಶ ಯದ್ದಲದೊಡ್ಡಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಊರಿನ ಹಿರಿಯರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು