3:50 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಸ್ವ ಕ್ಷೇತ್ರದ ಕಾರ್ಯಕ್ರಮ: ಶಾಸಕ ಕುಮಠಳ್ಳಿ ಗೈರು; ಮಾಜಿ ಡಿಸಿಎಂ ಸವದಿ ಹಾಜರು

14/11/2022, 21:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಮತಕ್ಷೇತ್ರದಲ್ಲಿ ಏನೇ ಸರ್ಕಾರಿ ಕೆಲಸಗಳು, ಗುದ್ದಲಿ ಪೂಜೆ, ಸಭೆ ನಡೆದಾಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಂತೂ ಇದ್ದೇ ಇರತ್ತಾರೆ. ಆದರೆ ಕ್ಷೇತ್ರದ ಪ್ರತಿನಿಧಿಯಾದ ಶಾಸಕ ಮಹೇಶ ಕುಮಠಳ್ಳಿ ಅವರು ಅವರದೇ ಪಕ್ಷದ ಸಚಿವರುಗಳು ಬಂದರೂ ಅಂತರ ಕಾಯ್ದುಕೊಳ್ಳುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಕೆಲ ತಿಂಗಳಗಳ ಹಿಂದೆ 9 ಕೆರೆ ತುಂಬುವ ಯೋಜನೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸಚಿವ ಜೆ. ಸಿ. ಮಾಧುಸ್ವಾಮಿ ಹಾಗೂ ಅಥಣಿ ತಾಲೂಕಿನ‌ ಕೊಟ್ಟಲಗಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ. ಸಿ. ಪಾಟೀಲ್ ಅವರು ಸುಮಾರು 35 ಕೋಟಿ ರೂ ವೆಚ್ಚದ ಕೊಟ್ಟಲಗಿ – ನಿಪ್ಪಾಣಿ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿದರು. ಆಗಲೂ ಕೂಡಾ ಕುಮಠಳ್ಳಿ ಗೈರಾಗಿದ್ದರು. ನಿನ್ನೆ (ರವಿವಾರ) ಅಥಣಿ ಹೊರವಲಯದಲ್ಲಿರುವ ಹಳ್ಯಾಳ ರೈತ ಸಭಾ ಭವನದಲ್ಲಿ ತಳವಾರ ಸಮುದಾಯದಿಂದ ಅಭಿನಂದನೆ ಸಮಾವೇಶಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಗೈರಾಗಿದ್ದಾರೆ.


ಕಳೆದ ಮೂರು ಕಾರ್ಯಕ್ರಮಕ್ಕೆ ಸಚಿವರು ಸ್ವ ಕ್ಷೇತ್ರಕ್ಕೂ ಬಂದರೂ ಶಾಸಕ ಮಹೇಶ ಕುಮಠಳ್ಳಿ ಗೈರಾಗಿದ್ದಾರೆ. ಯಾವುದೇ ಸಚಿವರು ಕ್ಷೇತ್ರಕ್ಕೆ ಬಂದಾಗ ಅವರನ್ನ ಅಹ್ವಾನ ಮಾಡಬೇಕಾದದ್ದು ಆ ಕ್ಷೇತ್ರದ ಶಾಸಕರು. ಆದರೆ, ಪ್ರತಿಸಲ ಸಚಿವರು ಬಂದಾಗ ಆಹ್ವಾನ ಮಾಡೊದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಒಂದೆರಡ ಸಲ ಯಾವುದೇ ಕಾರ್ಯಕ್ರಮಕ್ಕೆ ಹೋದರು ಮೂರನೇ ಸಲಕ್ಕಾದರೂ ಶಾಸಕ ಮಹೇಶ ಕುಮಠಳ್ಳಿ ಸಚಿವರ ಕಾರ್ಯಕ್ರಮಕ್ಕೆ ಭಾಗಿಯಾಗಬೇಕಿತ್ತು ಅಂತ ಅಥಣಿ ಮತಕ್ಷೇತ್ರದ ಜನ ಮಾತನಾಡಿಕೊಳ್ಳುತ್ತುದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು