5:49 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಸ್ವ ಕ್ಷೇತ್ರದ ಕಾರ್ಯಕ್ರಮ: ಶಾಸಕ ಕುಮಠಳ್ಳಿ ಗೈರು; ಮಾಜಿ ಡಿಸಿಎಂ ಸವದಿ ಹಾಜರು

14/11/2022, 21:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಮತಕ್ಷೇತ್ರದಲ್ಲಿ ಏನೇ ಸರ್ಕಾರಿ ಕೆಲಸಗಳು, ಗುದ್ದಲಿ ಪೂಜೆ, ಸಭೆ ನಡೆದಾಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಂತೂ ಇದ್ದೇ ಇರತ್ತಾರೆ. ಆದರೆ ಕ್ಷೇತ್ರದ ಪ್ರತಿನಿಧಿಯಾದ ಶಾಸಕ ಮಹೇಶ ಕುಮಠಳ್ಳಿ ಅವರು ಅವರದೇ ಪಕ್ಷದ ಸಚಿವರುಗಳು ಬಂದರೂ ಅಂತರ ಕಾಯ್ದುಕೊಳ್ಳುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಕೆಲ ತಿಂಗಳಗಳ ಹಿಂದೆ 9 ಕೆರೆ ತುಂಬುವ ಯೋಜನೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸಚಿವ ಜೆ. ಸಿ. ಮಾಧುಸ್ವಾಮಿ ಹಾಗೂ ಅಥಣಿ ತಾಲೂಕಿನ‌ ಕೊಟ್ಟಲಗಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ. ಸಿ. ಪಾಟೀಲ್ ಅವರು ಸುಮಾರು 35 ಕೋಟಿ ರೂ ವೆಚ್ಚದ ಕೊಟ್ಟಲಗಿ – ನಿಪ್ಪಾಣಿ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿದರು. ಆಗಲೂ ಕೂಡಾ ಕುಮಠಳ್ಳಿ ಗೈರಾಗಿದ್ದರು. ನಿನ್ನೆ (ರವಿವಾರ) ಅಥಣಿ ಹೊರವಲಯದಲ್ಲಿರುವ ಹಳ್ಯಾಳ ರೈತ ಸಭಾ ಭವನದಲ್ಲಿ ತಳವಾರ ಸಮುದಾಯದಿಂದ ಅಭಿನಂದನೆ ಸಮಾವೇಶಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಗೈರಾಗಿದ್ದಾರೆ.


ಕಳೆದ ಮೂರು ಕಾರ್ಯಕ್ರಮಕ್ಕೆ ಸಚಿವರು ಸ್ವ ಕ್ಷೇತ್ರಕ್ಕೂ ಬಂದರೂ ಶಾಸಕ ಮಹೇಶ ಕುಮಠಳ್ಳಿ ಗೈರಾಗಿದ್ದಾರೆ. ಯಾವುದೇ ಸಚಿವರು ಕ್ಷೇತ್ರಕ್ಕೆ ಬಂದಾಗ ಅವರನ್ನ ಅಹ್ವಾನ ಮಾಡಬೇಕಾದದ್ದು ಆ ಕ್ಷೇತ್ರದ ಶಾಸಕರು. ಆದರೆ, ಪ್ರತಿಸಲ ಸಚಿವರು ಬಂದಾಗ ಆಹ್ವಾನ ಮಾಡೊದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಒಂದೆರಡ ಸಲ ಯಾವುದೇ ಕಾರ್ಯಕ್ರಮಕ್ಕೆ ಹೋದರು ಮೂರನೇ ಸಲಕ್ಕಾದರೂ ಶಾಸಕ ಮಹೇಶ ಕುಮಠಳ್ಳಿ ಸಚಿವರ ಕಾರ್ಯಕ್ರಮಕ್ಕೆ ಭಾಗಿಯಾಗಬೇಕಿತ್ತು ಅಂತ ಅಥಣಿ ಮತಕ್ಷೇತ್ರದ ಜನ ಮಾತನಾಡಿಕೊಳ್ಳುತ್ತುದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು